ಬೆಂಗಳೂರು : ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಈಡೇರಿಸಲಿ, ನಾವು ಕರೆಂಟ್ ಬಿಲ್ಲ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ.
ಇದರ ನಡುವೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಬೇಕೆಂದು ಮಹಿಳೆಯರು ಗಲಾಟೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಸ್ ನಲ್ಲಿ ಟಿಕೆಟ್ ಮಾಡಿಸದೇ ಮಹಿಳೆಯರು ನಿರ್ವಾಹಕರ ಜೊತೆ ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಸಿಬ್ಬಂದಿಗೆ ತೊಂದರೆ ಕಿರಿಕಿರಿ ಆಗುತ್ತಿದೆ. ಇದಕ್ಕೆ ಶೀಘ್ರ ಪರಿಹಾರ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಸಾರಿಗೆ ಯೂನಿಯನ್ ವತಿಯಿಂದ ಪತ್ರ ಬರೆಯಲಾಗಿದೆ.
ಬಸ್ ನಲ್ಲಿ ಮಹಿಳೆಯರು ಹಣ ನೀಡಲು ನಿರಾಕರಿಸುತ್ತಿದ್ದಾರೆ. ಹಣ ನೀಡುವಂತೆ ಕೇಳಿದ್ರೆ ಗಲಾಟೆ ಮಾಡುತ್ತಾರೆ. ಇದರಿಂದ ನಮ್ಮ ಸಿಬ್ಬಂದಿ ಟಿಕೆಟ್ ಪಡೆಯುವದೇ ಕಷ್ಟವಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ಶೀಘ್ರ ಉಚಿತ ಪ್ರಯಾಣ ಯೋಜನೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಕಾಂಗ್ರೆಸ್ ಚುನಾವಣೆ ವೇಳೆ ಘೋಷಣೆ ಮಾಡಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…