ಬೆಂಗಳೂರು : ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಈಡೇರಿಸಲಿ, ನಾವು ಕರೆಂಟ್ ಬಿಲ್ಲ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ.
ಇದರ ನಡುವೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಬೇಕೆಂದು ಮಹಿಳೆಯರು ಗಲಾಟೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಸ್ ನಲ್ಲಿ ಟಿಕೆಟ್ ಮಾಡಿಸದೇ ಮಹಿಳೆಯರು ನಿರ್ವಾಹಕರ ಜೊತೆ ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಸಿಬ್ಬಂದಿಗೆ ತೊಂದರೆ ಕಿರಿಕಿರಿ ಆಗುತ್ತಿದೆ. ಇದಕ್ಕೆ ಶೀಘ್ರ ಪರಿಹಾರ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಸಾರಿಗೆ ಯೂನಿಯನ್ ವತಿಯಿಂದ ಪತ್ರ ಬರೆಯಲಾಗಿದೆ.
ಬಸ್ ನಲ್ಲಿ ಮಹಿಳೆಯರು ಹಣ ನೀಡಲು ನಿರಾಕರಿಸುತ್ತಿದ್ದಾರೆ. ಹಣ ನೀಡುವಂತೆ ಕೇಳಿದ್ರೆ ಗಲಾಟೆ ಮಾಡುತ್ತಾರೆ. ಇದರಿಂದ ನಮ್ಮ ಸಿಬ್ಬಂದಿ ಟಿಕೆಟ್ ಪಡೆಯುವದೇ ಕಷ್ಟವಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ಶೀಘ್ರ ಉಚಿತ ಪ್ರಯಾಣ ಯೋಜನೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಕಾಂಗ್ರೆಸ್ ಚುನಾವಣೆ ವೇಳೆ ಘೋಷಣೆ ಮಾಡಿತ್ತು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…