Featured

ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಬೇಡಿ , ಈ ಕುರಿತು ಧ್ವನಿ ಎತ್ತಿ : ನಟಿ ರಮ್ಯಾ -Vishwanews24

ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಬೇಡಿ , ಈ ಕುರಿತು ಧ್ವನಿ ಎತ್ತಿ : ನಟಿ ರಮ್ಯಾ -Vishwanews24

ಬೆಂಗಳೂರು : ಮಹಿಳೆಯ ಮೇಲೆ ಪುರುಷನೊಬ್ಬ ದೌರ್ಜನ್ಯ ಎಸಗಿದರೂ ಕೊನೆಗೆ ದೂಷಣೆಗೆ ಒಳಗಾಗುವುದು ಮಹಿಳೆಯೇ. ಹಾಗಾಗಿ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಬೇಡಿ. ಈ ಕುರಿತು ಧ್ವನಿ ಎತ್ತಿ ಎಂದು ಮಾಜಿ ಸಂಸದೆ, ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದಕ್ಕೆ ಸಂಬಂಧಿಸಿದಂತೆ ಯುವಕ–ಯುವತಿ ರಾತ್ರಿ 7.30ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಆ ವೇಳೆಯಲ್ಲಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಇನ್ನು ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ, “ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು…ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು…ಈ ಅವಿವೇಕದ ಮಾತುಗಳು ಸಾಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ನಾನೂ ಎದುರಿಸಿದ್ದೇನೆ. ಇದು ಇಂದಿಗೆ ಕೊನೆಯಾಗಲಿ” ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

11 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

11 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

12 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

14 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

14 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

14 hours ago