ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್ ಕೋಟ್ಯಂತರ ಮಹಿಳೆಯರಿಗೆ ದ್ರೋಹ ಬಗೆದಿದೆ. ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ. ಮುಂಬರುವ ರಾಜ್ಯಗಳ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳಾ ಮೀಸಲು ಮಸೂದೆಗೆ ಸೋಲಾಗಿದ್ದು ಸಾಮಾನ್ಯ ವಿಚಾರ ಅಲ್ಲ. ಇದು ರಾಜಕೀಯ ಪಕ್ಷಗಳ ಪಿತೂರಿ, ನಿರ್ಲಕ್ಷ್ಯ, ಮಹಿಳಾ ವಿರೋಧಿ ಭಾವನೆಯ ಸ್ಪಷ್ಟ ಸಂಕೇತ ಎಂದರು.
ದೇಶದ ಇತಿಹಾಸದಲ್ಲೇ ಮಹಿಳೆಯರಿಗೆ ಅವರ ಹಕ್ಕನ್ನು ಸಂವಿಧಾನದತ್ತವಾಗಿ ಕೊಡುವ ತೀರ್ಮಾನವನ್ನು ನರೇಂದ್ರ ಮೋದಿ ಅವರು ಮಾಡಿದ್ದರು. ಆದರೆ ಇದಕ್ಕೆ ಕಾಂಗ್ರೆಸ್ ಬೆಂಬಲ ನೀಡದೆ ಕೋಟ್ಯಂತರ ಮಹಿಳೆಯರ ಕನಸುಗಳ ಮೇಲೆ ಹೊಡೆತ ನೀಡಿತು. ಇದು ಕೇವಲ ಮಸೂದೆ ವಿಫಲತೆ ಅಲ್ಲ. ಮಹಿಳೆಯರ ಹಕ್ಕನ್ನು ನಿರ್ಲಕ್ಷ್ಯ ಮಾಡುವ ಕಾಂಗ್ರೆಸ್ ಅನ್ನು ಜನ ಕ್ಷಮಿಸುವುದಿಲ್ಲ ಎಂದು ವಿವರಿಸಿದರು.
ಇದನ್ನೂ ಓದಿ :
ಮಹಿಳಾ ಮೀಸಲು ಮಸೂದೆ ಸರ್ವಾನುಮತದಿಂದ ಬೆಂಬಲ ಸಿಗಬೇಕಿತ್ತು. ಆದರೆ ಬೆಂಬಲ ನೀಡದೆ ವಿಧಾನಸಭೆಗೆ ಸಂಸತ್ತಿಗೆ ಹೋಗುತ್ತೇವೆ ಎಂಬ ಮಹಿಳೆಯರ ಕನಸನ್ನು ನುಚ್ಚು ನೂರು ಮಾಡಿದೆ. ಮಹಿಳೆಯರ ಶಾಪ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ತಟ್ಟದೇ ಬಿಡುವುದಿಲ್ಲ ಎಂದರು. ಕಳೆದ 70 ವರ್ಷಗಳಿಂದ ಅಧಿಕಾರ ನಡೆಸಿದ ಕಾಂಗ್ರೆಸ್, ಮಹಿಳೆಯ ಹಕ್ಕಿನ ಬಗ್ಗೆ ವೇದಿಕೆಗಳಲ್ಲಿ ದೊಡ್ಡ ದೊಡ್ಡ ಭಾಷಣ ಮಾಡಿತು. ಆದರೆ ಕಾರ್ಯರೂಪಕ್ಕೆ ತರಲಿಲ್ಲ. ಮೀಸಲು ಮಸೂದೆಗೆ ಬೆಂಬಲ ಕೊಡುವ ಧೈರ್ಯ ಇಲ್ಲದ ಮೇಲೆ ಮಹಿಳೆಯರ ಬಗ್ಗೆ ಮಾತನಾಡುವ ಅಧಿಕಾರವೂ ಕಾಂಗ್ರೆಸ್ಗೆ ಇಲ್ಲ. ಆದ್ದರಿಂದ ಮಹಿಳಾ ಕಾಂಗ್ರೆಸ್ ಘಟಕವನ್ನು ರದ್ದು ಮಾಡಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ಸಿಗರೇ ಇನ್ನೆಷ್ಟು ಕಾಲ ದಿನ, ವರ್ಷ ಮಹಿಳೆಯರನ್ನು ಕೇವಲ ಮತದಾರರಾಗಿ ಬಳಸುತ್ತೀರಿ. ಮಹಿಳೆಯರು ದುರ್ಬಲರು ಎಂದುಕೊಂಡು ನೆಹರು, ಇಂದಿರಾ, ಸೋನಿಯಾ ರಾಜ್ಯಭಾರ ಮಾಡಿದ್ದರಲ್ಲ. ಆಗ ನಿಮಗೆ ಅವರ ಶಕ್ತಿ ಬಗ್ಗೆ ತಿಳಿಯಲಿಲ್ಲವೇ ಎಂದರು. ಮಹಿಳಾ ಮೀಸಲಿಗೆ ಮೋದಿ ಅವರು ಮುಂದಾದರೆ ವಿರೋಧಿಸಿ ಹೀನ ಕಾರ್ಯ ಮಾಡಿದ್ದೀರಿ. ಇದು ಕಾಂಗ್ರೆಸ್ ರಕ್ತದಲ್ಲೇ ಇರುವ ವಿರೋಧಿ ನೀತಿ ಎಂದು ನುಡಿದರು.
ಇದನ್ನೂ ಓದಿ :
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…