ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಕಾನೂನಿನ ವಿಷಯದಲ್ಲಿ ದ್ವಿಮುಖ ನೀತಿ ಸಲ್ಲದು ಮುಸ್ಲಿಂ ಮಹಿಳೆಯರಿಗೆ ನ್ಯಾಯ, ಗೌರವ ಒದಗಿಸಲು ತ್ರಿವಳಿ ತಲಾಖ್ ಮಸೂದೆ ರೂಪಿಸಲಾಗಿದೆ ಎಂದು ಆಡಳಿತ ಸರ್ಕಾರ ಹೇಳಿಕೊಳ್ಳುತ್ತಿದೆ ಹೀಗಿರುವಾಗ, ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದೇಕೆ? ಬಿಜೆಪಿ ಮಹಿಳಾ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಈಗಲೇ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಲಿ ಎಂದರು.
ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ 10 ರಿಂದ 50 ವರ್ಷದೊಳಿಗಿನ ಮಹಿಳೆಯರೂ ಪ್ರವೇಶಿಸಬಹುದು ಎಂದು ಸ್ವತಃ ಸುಪ್ರೀಂಕೋರ್ಟ್ ಆದೇಶವಿದ್ದರೂ, ವಿರೋಧಿಸುತ್ತಿರುವ ಬಿಜೆಪಿ, ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಮಹಿಳೆಯರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸುತ್ತಿದೆ ಎಂದು ಟೀಕಿಸಿದರು. \
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…