ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಕಾನೂನಿನ ವಿಷಯದಲ್ಲಿ ದ್ವಿಮುಖ ನೀತಿ ಸಲ್ಲದು ಮುಸ್ಲಿಂ ಮಹಿಳೆಯರಿಗೆ ನ್ಯಾಯ, ಗೌರವ ಒದಗಿಸಲು ತ್ರಿವಳಿ ತಲಾಖ್ ಮಸೂದೆ ರೂಪಿಸಲಾಗಿದೆ ಎಂದು ಆಡಳಿತ ಸರ್ಕಾರ ಹೇಳಿಕೊಳ್ಳುತ್ತಿದೆ ಹೀಗಿರುವಾಗ, ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದೇಕೆ? ಬಿಜೆಪಿ ಮಹಿಳಾ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಈಗಲೇ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಲಿ ಎಂದರು.
ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ 10 ರಿಂದ 50 ವರ್ಷದೊಳಿಗಿನ ಮಹಿಳೆಯರೂ ಪ್ರವೇಶಿಸಬಹುದು ಎಂದು ಸ್ವತಃ ಸುಪ್ರೀಂಕೋರ್ಟ್ ಆದೇಶವಿದ್ದರೂ, ವಿರೋಧಿಸುತ್ತಿರುವ ಬಿಜೆಪಿ, ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಮಹಿಳೆಯರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸುತ್ತಿದೆ ಎಂದು ಟೀಕಿಸಿದರು. \
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…