ಮಂಗಳೂರು : ಫೇಸ್ಬುಕ್ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಗೋಕುಲ್ ರಾಜ್, ಪವನ್ ಬಂಧಿತ ಆರೋಪಿಗಳು. ಇವರು ಫೇಸ್ ಬುಕ್ನಲ್ಲಿ ಯುವತಿಯರ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಬಳಿಕ ಎಫ್.ಬಿ. ಫ್ರೆಂಡ್ಸ್ಗಳಿಗೆ ಯುವತಿಯರ ನಗ್ನ ಚಿತ್ರ ತಮ್ಮದೆಂದು ಕಳುಹಿಸುತ್ತಿದ್ದರು. ಬಳಿಕ ಮೆಸೇಜ್ ಮಾಡುವವರ ನಗ್ನ ಚಿತ್ರಗಳನ್ನು ಪಡೆಯುತ್ತಿದ್ದರು. ವಂಚನೆ ಮಾಡಿದ ಆರೋಪಿಗಳು ಇದೀಗ ಸಿಕ್ಕಿಬಿದ್ದಿದ್ದಾರೆ.
ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ. ನಂತರ ತನ್ನ ಅಸಲಿ ರೂಪ ತೋರ್ಪಡಿಸಿದ ಆರೋಪಿಗಳು ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಅವರಿಂದ ಹಣ ಪೀಕಿಸಿದ್ದಾರೆ.
ಸಾಕ್ಷಿ ಕಾರ್ತಿಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ ಕ್ರಿಯೆಟ್ ಮಾಡಿ, ಬಳಿಕ ಅದೇ ಹೆಸರಿನಲ್ಲಿ ದೂರು ಬಂದಿದೆ ಅಂತ ಯುವಕರಿಗೆ ಕರೆ ಮಾಡಿದ್ದಾರೆ. ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ. ಹೀಗೆ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆ.
ಮೋಸ ಹೋದ ಯುವಕರು ಕದ್ರಿ ಠಾಣೆಗೆ ದೂರು ನೀಡಿದ್ದು, ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.. ಪೊಲೀಸರು ಇದೀಗಾ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಸದ್ಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…