ಮಂಗಳೂರು : ಫೇಸ್ಬುಕ್ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಗೋಕುಲ್ ರಾಜ್, ಪವನ್ ಬಂಧಿತ ಆರೋಪಿಗಳು. ಇವರು ಫೇಸ್ ಬುಕ್ನಲ್ಲಿ ಯುವತಿಯರ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಬಳಿಕ ಎಫ್.ಬಿ. ಫ್ರೆಂಡ್ಸ್ಗಳಿಗೆ ಯುವತಿಯರ ನಗ್ನ ಚಿತ್ರ ತಮ್ಮದೆಂದು ಕಳುಹಿಸುತ್ತಿದ್ದರು. ಬಳಿಕ ಮೆಸೇಜ್ ಮಾಡುವವರ ನಗ್ನ ಚಿತ್ರಗಳನ್ನು ಪಡೆಯುತ್ತಿದ್ದರು. ವಂಚನೆ ಮಾಡಿದ ಆರೋಪಿಗಳು ಇದೀಗ ಸಿಕ್ಕಿಬಿದ್ದಿದ್ದಾರೆ.
ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ. ನಂತರ ತನ್ನ ಅಸಲಿ ರೂಪ ತೋರ್ಪಡಿಸಿದ ಆರೋಪಿಗಳು ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಅವರಿಂದ ಹಣ ಪೀಕಿಸಿದ್ದಾರೆ.
ಸಾಕ್ಷಿ ಕಾರ್ತಿಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ ಕ್ರಿಯೆಟ್ ಮಾಡಿ, ಬಳಿಕ ಅದೇ ಹೆಸರಿನಲ್ಲಿ ದೂರು ಬಂದಿದೆ ಅಂತ ಯುವಕರಿಗೆ ಕರೆ ಮಾಡಿದ್ದಾರೆ. ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ. ಹೀಗೆ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆ.
ಮೋಸ ಹೋದ ಯುವಕರು ಕದ್ರಿ ಠಾಣೆಗೆ ದೂರು ನೀಡಿದ್ದು, ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.. ಪೊಲೀಸರು ಇದೀಗಾ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಸದ್ಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…