ಮಂಗಳೂರು : ಫೇಸ್ಬುಕ್ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಗೋಕುಲ್ ರಾಜ್, ಪವನ್ ಬಂಧಿತ ಆರೋಪಿಗಳು. ಇವರು ಫೇಸ್ ಬುಕ್ನಲ್ಲಿ ಯುವತಿಯರ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಬಳಿಕ ಎಫ್.ಬಿ. ಫ್ರೆಂಡ್ಸ್ಗಳಿಗೆ ಯುವತಿಯರ ನಗ್ನ ಚಿತ್ರ ತಮ್ಮದೆಂದು ಕಳುಹಿಸುತ್ತಿದ್ದರು. ಬಳಿಕ ಮೆಸೇಜ್ ಮಾಡುವವರ ನಗ್ನ ಚಿತ್ರಗಳನ್ನು ಪಡೆಯುತ್ತಿದ್ದರು. ವಂಚನೆ ಮಾಡಿದ ಆರೋಪಿಗಳು ಇದೀಗ ಸಿಕ್ಕಿಬಿದ್ದಿದ್ದಾರೆ.
ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ. ನಂತರ ತನ್ನ ಅಸಲಿ ರೂಪ ತೋರ್ಪಡಿಸಿದ ಆರೋಪಿಗಳು ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಅವರಿಂದ ಹಣ ಪೀಕಿಸಿದ್ದಾರೆ.
ಸಾಕ್ಷಿ ಕಾರ್ತಿಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ ಕ್ರಿಯೆಟ್ ಮಾಡಿ, ಬಳಿಕ ಅದೇ ಹೆಸರಿನಲ್ಲಿ ದೂರು ಬಂದಿದೆ ಅಂತ ಯುವಕರಿಗೆ ಕರೆ ಮಾಡಿದ್ದಾರೆ. ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ. ಹೀಗೆ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆ.
ಮೋಸ ಹೋದ ಯುವಕರು ಕದ್ರಿ ಠಾಣೆಗೆ ದೂರು ನೀಡಿದ್ದು, ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.. ಪೊಲೀಸರು ಇದೀಗಾ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಸದ್ಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…