ಮಂಗಳೂರು : ಫೇಸ್ಬುಕ್ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಗೋಕುಲ್ ರಾಜ್, ಪವನ್ ಬಂಧಿತ ಆರೋಪಿಗಳು. ಇವರು ಫೇಸ್ ಬುಕ್ನಲ್ಲಿ ಯುವತಿಯರ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಬಳಿಕ ಎಫ್.ಬಿ. ಫ್ರೆಂಡ್ಸ್ಗಳಿಗೆ ಯುವತಿಯರ ನಗ್ನ ಚಿತ್ರ ತಮ್ಮದೆಂದು ಕಳುಹಿಸುತ್ತಿದ್ದರು. ಬಳಿಕ ಮೆಸೇಜ್ ಮಾಡುವವರ ನಗ್ನ ಚಿತ್ರಗಳನ್ನು ಪಡೆಯುತ್ತಿದ್ದರು. ವಂಚನೆ ಮಾಡಿದ ಆರೋಪಿಗಳು ಇದೀಗ ಸಿಕ್ಕಿಬಿದ್ದಿದ್ದಾರೆ.
ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ. ನಂತರ ತನ್ನ ಅಸಲಿ ರೂಪ ತೋರ್ಪಡಿಸಿದ ಆರೋಪಿಗಳು ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಅವರಿಂದ ಹಣ ಪೀಕಿಸಿದ್ದಾರೆ.
ಸಾಕ್ಷಿ ಕಾರ್ತಿಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ ಕ್ರಿಯೆಟ್ ಮಾಡಿ, ಬಳಿಕ ಅದೇ ಹೆಸರಿನಲ್ಲಿ ದೂರು ಬಂದಿದೆ ಅಂತ ಯುವಕರಿಗೆ ಕರೆ ಮಾಡಿದ್ದಾರೆ. ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ. ಹೀಗೆ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆ.
ಮೋಸ ಹೋದ ಯುವಕರು ಕದ್ರಿ ಠಾಣೆಗೆ ದೂರು ನೀಡಿದ್ದು, ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.. ಪೊಲೀಸರು ಇದೀಗಾ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಸದ್ಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…