Featured

ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್  ಖಾತೆ ತೆರೆದು ವಂಚನೆ ; ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ: ಇಬ್ಬರ ಬಂಧನ -Vishwanews24

ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್  ಖಾತೆ ತೆರೆದು ವಂಚನೆ ; ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ: ಇಬ್ಬರ ಬಂಧನ -Vishwanews24

ಮಂಗಳೂರು : ಫೇಸ್ಬುಕ್‌ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗೋಕುಲ್ ರಾಜ್, ಪವನ್ ಬಂಧಿತ ಆರೋಪಿಗಳು. ಇವರು ಫೇಸ್ ಬುಕ್ನಲ್ಲಿ ಯುವತಿಯರ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಬಳಿಕ ಎಫ್.ಬಿ. ಫ್ರೆಂಡ್ಸ್ಗಳಿಗೆ ಯುವತಿಯರ ನಗ್ನ ಚಿತ್ರ ತಮ್ಮದೆಂದು ಕಳುಹಿಸುತ್ತಿದ್ದರು. ಬಳಿಕ ಮೆಸೇಜ್ ಮಾಡುವವರ ನಗ್ನ ಚಿತ್ರಗಳನ್ನು ಪಡೆಯುತ್ತಿದ್ದರು. ವಂಚನೆ ಮಾಡಿದ ಆರೋಪಿಗಳು ಇದೀಗ ಸಿಕ್ಕಿಬಿದ್ದಿದ್ದಾರೆ.

ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ. ನಂತರ ತನ್ನ ಅಸಲಿ ರೂಪ ತೋರ್ಪಡಿಸಿದ ಆರೋಪಿಗಳು ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಅವರಿಂದ ಹಣ ಪೀಕಿಸಿದ್ದಾರೆ.

ಸಾಕ್ಷಿ ಕಾರ್ತಿಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ ಕ್ರಿಯೆಟ್ ಮಾಡಿ, ಬಳಿಕ ಅದೇ ಹೆಸರಿನಲ್ಲಿ ದೂರು ಬಂದಿದೆ ಅಂತ ಯುವಕರಿಗೆ ಕರೆ ಮಾಡಿದ್ದಾರೆ. ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ. ಹೀಗೆ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆ.

ಮೋಸ ಹೋದ ಯುವಕರು ಕದ್ರಿ ಠಾಣೆಗೆ ದೂರು ನೀಡಿದ್ದು, ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.. ಪೊಲೀಸರು ಇದೀಗಾ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಸದ್ಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Vishwa News 24

Recent Posts

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

8 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

25 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

41 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

56 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago