ಬೆಂಗಳೂರು: ಕಳೆದ ಮಂಗಳವಾರದ ಮಧ್ಯಾಹ್ನದಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಜೊಮ್ಯಾಟೋ ಡಿಲಿವರಿ ಬಾಯ್ ಯುವತಿಯೊಬ್ಬಳಿಗೆ ಮೂಗು ಮುರಿಯುವಂತೆ ಗುದ್ದಿದ್ದಾಗಿ, ಆ ಯುವತಿಯೇ ಸೋಷಿಯನ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಳು ಆಕೆಯ ಮೂಗು ಮುರಿದ ಜೊಮ್ಯಾಟೊ ಡೆಲಿವರಿ ಬಾಯ್ನನ್ನು ಎಲೆಕ್ಟ್ರಾನಿಕ್ಸಿಟಿ ಪೊಲೀಸರು ಬಂಧಿಸಿದ್ದಾರೆ. ಆದರೆ ದಿನ ಕಳೆದಂತೆ ಇದೀಗ ಹೊಸ ಆಯಾಮವೊಂದು ಈ ಕೇಸ್ಗೆ ಸಿಕ್ಕಿದೆ.
ಯುವತಿಯೇ ರಂಪಾಟ ಮಾಡಿಕೊಂಡು ಇಷ್ಟೆಲ್ಲ ಅವಾಂತರ ಮಾಡಿರುವುದಾಗಿ ಜೊಮ್ಯಾಟೊ ಡೆಲಿವರಿ ಬಾಯ್ ಹೇಳಿಕೊಂಡಿದ್ದಾರೆ. ಈತನ ಹೇಳಿಕೆ ಬೆನ್ನಲ್ಲೇ ಅನೇಕರು ಜೊಮ್ಯಾಟೊ ಡೆಲಿವರಿ ಬಾಯ್ನ ಬೆಂಬಲಕ್ಕೆ ನಿಂತಿದ್ದಾರೆ. ಜೊಮ್ಯಾಟೊ ಡೆಲಿವರಿ ಬಾಯ್ ಪರವಾಗಿ ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಕೂಡ ಶುರುವಾಗಿದೆ.
ಜೊಮ್ಯಾಟೊ ಡೆಲಿವರಿ ಬಾಯ್ ಕಾಮ್ರಾಜ್ ಹೇಳುವುದೇನು?
ನಾನು ಯುವತಿ ಮನೆಯ ಬಾಗಿಲನ್ನು ತಲುಪಿದ ನಂತರ, ಆಕೆಗೆ ಅವರು ಆರ್ಡರ್ ಮಾಡಿದ ಆಹಾರವನ್ನು ಹಸ್ತಾಂತರಿಸಿದೆ. ಆಹಾರದ ಹಣ ಪಾವತಿಸುತ್ತಾರೆಂದುಕೊಂಡು ಮನೆ ಬಾಗಿಲಿನಲ್ಲಿ ಕಾಯುತ್ತಿದೆ. ಆಗ ನೀನು ಏಕೆ ಆಹಾರ ತರಲು ತಡ ಮಾಡಿದ್ದಿ ಎಂದು ಅವರು ಕೊಂಚ ಜೋರಾಗೆ ಕೇಳಿದರು.
ಇದಕ್ಕೆ ನಾನು ಟ್ರಾಫಿಕ್ ಜಾಮ್ ಹಾಗೂ ಕಾಮಗಾರಿ ನಡೆಯುತ್ತಿರುವುದರಿಂದ ತಡವಾಯಿತು ಎಂದು ವಿನಮ್ರದಿಂದ ಕ್ಷಮೆಯಾಚಿಸಿ ಕೇಳಿದೆ. ಆದರೆ ಮತ್ತೆ ಯುವತಿ 40-45 ನಿಮಿಷವೆಂದು ಹೇಳಿ ಇಷ್ಟು ಸಮಯ ತೆಗೆದುಕೊಂಡರೆ ಹೇಗೆ ಎಂದು ಮತ್ತೆ ದಬಾಯಿಸಿದರು ಎಂದು ವಿವರಿಸಿದ ಕಾಮರಾಜ್, ಸುಮಾರು ಎರಡು ವರ್ಷಗಳಿಂದ ನಾನು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದೇನೆ. ಇದೇ ಮೊದಲ ಬಾರಿಗೆ ಈ ರೀತಿಯ ಸನ್ನಿವೇಶ ಸಂಭವಿಸಿದೆ ಎಂದು ತನ್ನ ನೋವು ತೋಡಿಕೊಂಡರು.
ಕೊರೋನಾ 2ನೇ ಅಲೆ ಭೀತಿ : ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ -Vishwanews24
“ನಾನು ಹಣ ನೀಡುವಂತೆ ಯುವತಿ ಬಳಿ ಮನವಿ ಮಾಡಿದದೆ. ಆದರೆ ಯುವತಿ ಹಣ ಕೊಡುವುದಿಲ್ಲ ಬದಲಾಗಿ ಜೊಮ್ಯಾಟೊ ಕಸ್ಟಮರ್ ಸಪೋರ್ಟರ್ ಹತ್ತಿರ ಮಾತನಾಡುತ್ತೇನೆ ಎಂದಿದ್ದಾಳೆ. ನಂತರ ಕಸ್ಟಮರ್ ಕೇರ್ಗೆ ಕರೆ ಕನೆಕ್ಟ್ ಆಗಿದೆ. ಆತ ಫುಡ್ ಹಿಂದಿರುಗಿಸುವಂತೆ ಯುವತಿಗೆ ಹೇಳಿದ್ದಾರೆ. ಹೀಗಾಗಿ ನಾನು ಮತ್ತೆ ಮೇಡಂ ಫುಡ್ ವಾಪಸ್ ಕೊಡಿ ಎಂದು ಕೇಳಿದೆ. ಆದರೆ ಮಹಿಳೆ ಆಹಾರ ವಾಪಸ್ ನೀಡಲು ಹಿಂದೇಟು ಹಾಕಿದ್ದಾರೆ.
ಅಲ್ಲದೇ ನನಗೆ ಬೈಯಲು ಆರಂಭಿಸಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಆಹಾರದ ಪೊಟ್ಟಣ ಅಲ್ಲೇ ಬಿಟ್ಟು ವಾಪಸ್ ಹೋಗಲು ನಾನು ಮುಂದಾದೆ. ಈ ವೇಳೆ ಯುವತಿ ಆಕೆಯ ಚಪ್ಪಲನ್ನು ನನ್ನ ಮೇಲೆ ಎಸೆದಳು. ಹಿಂದಿಯಲ್ಲಿ ಅವಾಚ್ಯವಾಗಿ ಬೈದಳು. ನಂತರ ನನಗೆ ಹೊಡೆದಳು. ಹೀಗೆ ಆಕೆ ತನ್ನ ಕೈನಿಂದ ಹೊಡೆಯುವಾಗು ನಾನು ಅದರಿಂದ ತಪ್ಪಿಸಿಕೊಳ್ಳಲು ಮುಂದಾದೆ.
ಈ ವೇಳೆ ಆಕೆ ಹೊಡೆಯುವ ರಭಸದಲ್ಲಿ ಆಕೆಯ ಕೈಯಲ್ಲಿದ್ದ ಉಂಗುರದಿಂದ ಆಕೆಯ ತನ್ನ ಮೂಗಿಗೆ ಹೊಡೆದುಕೊಂಡಿದ್ದಾಳೆ ಎಂದು ಕಾಮ್ರಾಜ್ ಸ್ಪಷ್ಟನೆ ನೀಡಿದ್ದಾರೆ. ಪೆಟ್ಟು ಬಿದ್ದ ತಕ್ಷಣ ಮೂಗಿನಿಂದ ರಕ್ತ ಬರಲು ಆರಂಭವಾಯ್ತು, ನಾನು ಅಲ್ಲಿಂದ ಭಯದಲ್ಲಿ ಓಡಿ ಹೋದೆ. ನಂತರ ಜೊಮ್ಯಾಟೋ ಕಸ್ಟಮರ್ ಸಪೋರ್ಟರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದೆ ಎಂದು ಕಾಮ್ರಾಜ್ ಅಳಲು ತೋಡಿಕೊಂಡಿದ್ದಾರೆ.ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…