Featured

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ ಪ್ರಕರಣ: ಮುನಿರತ್ನಗೆ ಬಿಗ್ ರಿಲೀಫ್ – vishwanews24

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್‌ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ.

ಸಿಐಡಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಮುನಿರತ್ನ, “ಇದು ಸತ್ಯಕ್ಕೆ ಸಂದ ಜಯವಾಗಿದೆ. ಕಂಡವರ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದನ್ನು ಬಿಡಬೇಕು. ಡಿಕೆ ಸುರೇಶ್ ಸೋತ ನಂತರ, ಕುಸುಮಾ ಸೋತ ನಂತರ ನನ್ನ ವಿರುದ್ಧ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗಿವೆ. ಯಾರಿಗೆ ಯಾವುದೂ ಶಾಶ್ವತವಲ್ಲ, ನಾನು ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ. ಸುದ್ದಿಗೋಷ್ಠಿ ನಡೆಸಿ, ಎಲ್ಲ ಮಾಹಿತಿಗಳನ್ನು ಹಂಚಿಕೊಳ್ಳುತ್ತೇನೆ” ಎಂದು ತಿಳಿಸಿದರು.

ಏನಿದು ಪ್ರಕರಣ?
2025 ಮೇ 20 ರಂದು ಸುಮಾರು 40 ವರ್ಷ ವಯಸ್ಸಿನ ಮಹಿಳೆ ನಗರದ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕ ಮುನಿರತ್ನ ಸೇರಿದಂತೆ ಅವರ ಬೆಂಬಲಿಗರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಈ ಬಗ್ಗೆ ಆರ್‌ಎಂಸಿ ಯಾರ್ಡ್ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಎಸ್‌ಐಟಿ ತನಿಖೆಗೆ ವಹಿಸಿತ್ತು. ಕಳೆದ ಐದು ತಿಂಗಳಿನಿಂದ ತನಿಖೆ ನಡೆಸಿದ ಎಸ್‌ಐಟಿ ತಂಡವು ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ. ರಿಪೋರ್ಟ್ ಸಲ್ಲಿಕೆ ಮಾಡಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

24 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

24 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago