ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ.
ಸಿಐಡಿ ಎಸ್ಐಟಿ ಬಿ ರಿಪೋರ್ಟ್ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಮುನಿರತ್ನ, “ಇದು ಸತ್ಯಕ್ಕೆ ಸಂದ ಜಯವಾಗಿದೆ. ಕಂಡವರ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದನ್ನು ಬಿಡಬೇಕು. ಡಿಕೆ ಸುರೇಶ್ ಸೋತ ನಂತರ, ಕುಸುಮಾ ಸೋತ ನಂತರ ನನ್ನ ವಿರುದ್ಧ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗಿವೆ. ಯಾರಿಗೆ ಯಾವುದೂ ಶಾಶ್ವತವಲ್ಲ, ನಾನು ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ. ಸುದ್ದಿಗೋಷ್ಠಿ ನಡೆಸಿ, ಎಲ್ಲ ಮಾಹಿತಿಗಳನ್ನು ಹಂಚಿಕೊಳ್ಳುತ್ತೇನೆ” ಎಂದು ತಿಳಿಸಿದರು.
ಏನಿದು ಪ್ರಕರಣ?
2025 ಮೇ 20 ರಂದು ಸುಮಾರು 40 ವರ್ಷ ವಯಸ್ಸಿನ ಮಹಿಳೆ ನಗರದ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕ ಮುನಿರತ್ನ ಸೇರಿದಂತೆ ಅವರ ಬೆಂಬಲಿಗರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಈ ಬಗ್ಗೆ ಆರ್ಎಂಸಿ ಯಾರ್ಡ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಿತ್ತು. ಕಳೆದ ಐದು ತಿಂಗಳಿನಿಂದ ತನಿಖೆ ನಡೆಸಿದ ಎಸ್ಐಟಿ ತಂಡವು ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ. ರಿಪೋರ್ಟ್ ಸಲ್ಲಿಕೆ ಮಾಡಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…