Featured

ಮಹಿಳೆ ಮೇಲೆ ಹಲ್ಲೆ ಘಟನೆ: ಮಲ್ಪೆ ಮೀನುಗಾರರ ಸಂಘದ ಸ್ಪಷ್ಟನೆ – vishwanews24

ಮಹಿಳೆ ಮೇಲೆ ಹಲ್ಲೆ ಘಟನೆ: ಮಲ್ಪೆ ಮೀನುಗಾರರ ಸಂಘದ ಸ್ಪಷ್ಟನೆ

ಮಾ.22ರಂದು ಮೀನುಗಾರಿಕೆ ಸ್ಥಗಿತಗೊಳಿಸಿ ಪ್ರತಿಭಟನೆ

ಉಡುಪಿ : ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ ಆದ ಬೆಳವಣಿಗೆಯಿಂದ ಮೀನುಗಾರರು ಹಾಗೂ ಸಮುದಾಯಕ್ಕೆ ಕಳಂಕ ಬರುವಂತಾಗಿದೆ. ಈ ಬಗ್ಗೆ ಮೀನುಗಾರಿಕಾ ಬಂದರಿನಲ್ಲಿ ಸ್ವಇಚ್ಛೆಯಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮಾ.22 ರಂದು ಬೆಳಗ್ಗೆ ಸಮಸ್ತ ಮೀನುಗಾರರಿಂದ ಪ್ರತಿಭಟನೆ ನಡೆಯಲಿದೆ. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಲಾಗುವುದು ಎಂದು ಮಲ್ಪೆ ಮೀನುಗಾರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.18ರಂದು ಮುಂಜಾನೆ ಮಲ್ಪೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಸಾಮಾನ್ಯವಾಗಿ ಮಾಡು ವಂತೆ ನ್ಯಾಯ ಪಂಚಾಯಿತಿ ಮುಖಾಂತರ ಪರಿಹಾರ ಮಾಡಿಕೊಂಡಿದ್ದು, ಬಳಿಕ ಮಲ್ಪೆಯ ಠಾಣಾಧಿಕಾರಿ ಗಳ ಗಮನಕ್ಕೆ ತಂದು 2 ಪಾರ್ಟಿಯವರು ಹಾಗೂ ಮೀನುಗಾರ ಮುಖಂಡರ ಸಮಕ್ಷಮದಲ್ಲಿ ರಾಜಿ ಮಾಡಲಾಗಿತ್ತು. ಇಲ್ಲಿ ಎರಡು ಪಾರ್ಟಿಯವರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಠಾಣಾಧಿಕಾರಿಗಳು 2 ಪಾರ್ಟಿಯವರದಿಂದ ತಪ್ಪೊಪ್ಪಿಗೆ ಹಿಂಬರಹ ಬರೆಸಿಕೊಂಡು ಇದನ್ನು ಇತ್ಯರ್ಥಗೊಳಿಸಿದ್ದರು ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆದರೆ ಮಾ.19ರಂದು ಅಪರಾಹ್ನ 12:30ರ ಸುಮಾರಿಗೆ ಬೋಟಿನ ಮಾಲಕರನ್ನು ರಾಜಿ ಪಂಚಾಯಿತಿಗೆ ಸಹಿ ಹಾಕಲೆಂದು ಕರೆಸಿ, ಸತ್ಯಾಸತ್ಯತೆಯನ್ನು ಅರಿಯದೇ ಬಂಧಿಸಿದ್ದಾರೆ. ಹಿರಿಯ ಅಧಿಕಾರಿಗಳು ಹಿಂದಿನ ದಿನ ಠಾಣಾಧಿಕಾರಿಗಳು ಮಾಡಿರುವ ರಾಜಿ ಪಂಚಾಯಿತಿಗೆ ಮಾನ್ಯತೆ ನೀಡದೇ 4 ಜನರ ಮೇಲೆ ಕೇಸು ದಾಖಲಿಸಿ ಜಾಮೀನು ರಹಿತ ಎಫ್‌ಐಆರ್ ಹಾಕಿ ಬಂಧಿಸಿದ್ದಾರೆ. ಇದು ಮೇಲ್ನೋಟಕ್ಕೆ ಯಾರದೊ ಒತ್ತಡಕ್ಕೆ ಒಳಗಾಗಿ ಬಡ ಮೀನುಗಾರರನ್ನು ಬಂಧಿಸಿರುವಂತೆ ಕಾಣುತ್ತದೆ ಎಂದು ಅಧ್ಯಕ್ಷರು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಮಲ್ಪೆ ಮೀನುಗಾರರ ಸಂಘ ಈ ಘಟನೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ಸ್ಥಳೀಯವಾಗಿ ನಮ್ಮ ಮೀನುಗಾರರ ಸಂಘಟನೆಗಳು ಎಲ್ಲರಿಗೂ ಸೌಹಾರ್ದಯುತವಾಗಿ ನ್ಯಾಯ ಕೊಡುವಲ್ಲಿ ಬದ್ಧವಾಗಿವೆ. ಅಲ್ಲದೇ ಈ ಘಟನೆಯಿಂದ ನಮ್ಮ ಮೀನುಗಾರ ಸಮುದಾಯಕ್ಕೆ ಕಳಂಕ ಬಂದಿದೆ. ಹೀಗಾಗಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಮಾ.22ರಂದು ಸ್ವಇಚ್ಛೆಯಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಬೆಳಗ್ಗೆ 9 ಗಂಟೆಗೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಗೆ ವಿವರಣೆ: ಮಾ.18ರ ಮುಂಜಾನೆ ಬಂದರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ಯಲ್ಲಿ ವಿವರಿಸಿರುವ ದಯಾನಂದ ಸುವರ್ಣ, ಅಂದು ಆರಾಧನಾ ಬೋಟಿನ ಮೀನು ಖಾಲಿ ಮಾಡುವ ಸಂದರ್ಭ ಮೀನು ಹೊರುವ ಮಹಿಳೆ ಒಂದು ಬುಟ್ಟಿ ಬೆಲೆಬಾಳುವ ಸಿಗಡಿ ಮೀನನ್ನು (ಸುಮಾರು 20ಕೆ.ಜಿ.-10,000ರೂ.ಮೌಲ್ಯದ) ಕದ್ದೋದ್ದಿದ್ದಾರೆ. ಈ ಬಗ್ಗೆ ಸಾರ್ವಜನಿಕವಾಗಿ ಸೇರಿದ ಜನರು ಆಕ್ರೋಶಿತರಾಗಿ ಈ ಘಟನೆ ನಡೆದಿದೆ. ಈ ಘಟನೆ ಉದ್ದೇಶಪೂರ್ವಕವಾಗಿರದೇ ಕ್ಷಣಿಕ ಸಿಟ್ಟಿನಿಂದ ನಡೆದ ಘಟನೆ ಯಾಗಿದೆ. ಬಳಿಕ ಅವರನ್ನು ಸಮಾಧಾನ ಪಡಿಸಿ ಕಳುಹಿಸಲಾಗಿತ್ತು ಎಂದಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ಮಕ್ಸ್ಯಕ್ಷಾಮದಿಂದ ಮೀನುಗಾರಿಕೆ ಕುಂಠಿತಗೊಂಡಿದ್ದು, ಬೋಟಿನವರು ಲಕ್ಷಾಂತರ ರೂ.ನಷ್ಟ ಅನುಭವಿಸಿಕೊಂಡು ಬರುತಿದ್ದಾರೆ. ಈ ಮಧ್ಯೆ ಬಹುಕಾಲದಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಸಲಕರಣೆಗಳಾದ ಬೋಟಿನ ಪ್ಯಾನ್, ಬ್ಯಾಟರಿ, ಜಿಪಿಎಸ್, ವೈಯರ್‌ಲೆಸ್, ಫಿಶ್‌ ಪೈಂಡರ್, ಬಲೆ ಸಾಮಗ್ರಿಗಳು ಹಾಗೂ ಮೀನುಗಳನ್ನು ಕಳ್ಳತನ ಮಾಡಿದ ಬಗ್ಗೆ ಸಾಕಷ್ಟು ದೂರುಗಳನ್ನು ಠಾಣೆಗೆ ನೀಡಿದ್ದರೂ ಯಾವುದೇ ನ್ಯಾಯ ಸಿಕ್ಕಿಲ್ಲ.

ಅಲ್ಲದೇ ಬಂದರು ನಿರ್ವಹಣೆಯ ಜವಾಬ್ದಾರಿ ವಹಿಸಿದವರು 30 ಮಂದಿ ಕಾವಲು ಸಿಬ್ಬಂದಿಗಳನ್ನು, ಎಲ್ಲಾ ಕಡೆಗಳಲ್ಲಿ ಸಿಸಿಕ್ಯಾಮರಾ ಅಳವಡಿಸಬೇಕೆಂದು ನಿಯಮವಿದ್ದರೂ, ಈ ಬಗ್ಗೆ ಎಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂಬ ಆಕ್ರೋಶ ಮೀನುಗಾರರಿಗೆ ಇತ್ತು ಎಂದೂ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago