ಮಾಂಡೌಸ್ ಚಂಡಮಾರುತ ಅಬ್ಬರ : ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಸ್ಥಗಿತ – Vishwanews24
ಮಾಂಡೌಸ್ ಚಂಡಮಾರುತ ಅಬ್ಬರ : ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಸ್ಥಗಿತ
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ
ದಕ್ಷಿಣ ಕನ್ನಡ: ಮಾಂಡೌಸ್ ಚಂಡಮಾರುತ ರಾಜ್ಯಾಧ್ಯಂತ ಅಬ್ಬರಿಸುತ್ತಿದೆ. ಚಳಿಗಾಳಿಯ ಸಹಿತ ತುಂತುರು ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಇದೇ ವೇಳೆ ಚಂಡಮಾರುತದ ಕಾರಣ ಕರಾವಳಿ ಜಿಲ್ಲೆಯಲ್ಲಿ ಆಳ ಸಮುದ್ರದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ.
ವಾಯುಭಾರ ಕುಸಿತದಿಂದಾಗಿ ವೇಗವಾದಂತ ಗಾಳಿ ಬೀಸೋದಕ್ಕೆ ಶುರುವಾಗಿದೆ. ಜೊತೆ ಚಂಡಮಾರುತದ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಇದು ಮೀನುಗಾರಿಕೆ ನಡೆಸೋದಕ್ಕೆ ಅಪಾಯಕಾರಿ ಎಂದು ಹೇಳಲಾಗಿದೆ.
ಈ ಹಿನ್ನಲೆಯಲ್ಲಿಯೇ ರಾಜ್ಯದ ಸರ್ವಋತು ಬಂದರು ಖ್ಯಾತಿಯ ಕಾರವಾರದ ಬೈತಖೋಲ್ ನಲ್ಲಿ ನೂರಕ್ಕೂ ಹೆಚ್ಚು ಬೋಟ್ ಗಳು ಆಳ ಸಮುದ್ರದ ಮೀನುಗಾರಿಕೆ ಸ್ಥಗಿತಗೊಳಿಸಿ ಲಂಗರು ಹಾಕಿವೆ.
ಕರಾವಳಿಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
