Featured

ಮಾಂಡೌಸ್ ಚಂಡಮಾರುತ : ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ – Vishwanews24

ಮಾಂಡೌಸ್ ಚಂಡಮಾರುತ – ನೆರೆಯ ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ

ನವದೆಹಲಿ: ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಂಡೌಸ್ ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದ್ದು, ಡಿಸೆಂಬರ್ 7 ರಂದು ಇದರ ತೀವ್ರತೆ ಹೆಚ್ಚಾಗಲಿದೆ. ಡಿಸೆಂಬರ್ 8 ರಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಕ್ಕೆ ತಲುಪಲಿದ್ದು, ನೈಋತ್ಯ ಬಂಗಾಳಕೊಲ್ಲಿ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ 2 ದಿನಗಳ ಕಾಲ ಹಲವಾರು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿ ಭಾಗ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago