Featured

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಬಯೋಪಿಕ್‌; ತೆರೆಮೇಲೆ ಬರಲಿದೆ ‘ಅಜಾತಶತ್ರು’ ಜೀವನ – Vishwanews24

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಬಯೋಪಿಕ್‌; ತೆರೆಮೇಲೆ ಬರಲಿದೆ ‘ಅಜಾತಶತ್ರು’ ಜೀವನ

ಬಾಲಿವುಡ್‌ನಲ್ಲಿ ಈಗಾಗಲೇ ಸಾಕಷ್ಟು ಬಯೋಪಿಕ್‌ಗಳು ಬಂದಿವೆ, ಬರುತ್ತಲಿವೆ. ಸಿನಿಮಾರಂಗ, ಕ್ರೀಡೆ, ರಾಜಕೀಯ ಹೀಗೆ ಹಲವು ಕ್ಷೇತ್ರಗಳ ಪ್ರಭಾವಿ ವ್ಯಕ್ತಿಗಳ ಬದುಕನ್ನು ತೆರೆಮೇಲೆ ತರಲಾಗುತ್ತಿದೆ. ಸಾಲಿಗೆ ಈಗ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರು ಕೂಡ ಕೇಳಿಬಂದಿದೆ. ಹೌದು, ಭಾರತ ಕಂಡಂತಹ ಅದ್ಭುತ ವಾಗ್ಮಿ, ಮಾಜಿ ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ (Atal Bihari Vajpayee) ಅವರ ಬಯೋಪಿಕ್‌ (Biopic) ಅನ್ನು ನಿರ್ಮಾಣ ಮಾಡುವುದಾಗಿ ಬಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ಅನೌನ್ಸ್‌ ಮಾಡಿದೆ.

ವಾಜಪೇಯಿ ಅವರ ಬದುಕನ್ನು ಆಧರಿಸಿದ ಸಿನಿಮಾ
ಭಾರತೀಯರು ಕಂಡಂತಹ ಒಬ್ಬ ಉತ್ತಮ ನಾಯಕ, ಲೇಖಕ, ಕವಿ ಅಟಲ್‌ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದರು. 1996ರಲ್ಲಿ 16 ದಿನಗಳ ಕಾಲ ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದರು. ನಂತರ 1998ರ ಮಾರ್ಚ್‌ನಿಂದ 1999ರ ಅಕ್ಟೋಬರ್ ವರೆಗೆ ದೇಶವನ್ನು ಮುನ್ನಡೆಸಿದ್ದರು. 1999ರ ಅಕ್ಟೋಬರ್‌ನಿಂದ 2004ರ ಮೇ ತಿಂಗಳವರೆಗೆ ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದರು. ಒಟ್ಟು ಮೂರು ಬಾರಿ ಪ್ರಧಾನಿಯಾಗಿ ವಾಜಪೇಯಿ ಅವರು ಕೆಲಸ ಮಾಡಿದ್ದರು.

ಇದೀಗ ಅವರ ಬಗ್ಗೆ ಸಿನಿಮಾ ಮಾಡಲು ವಿನೋದ್‌ ಭಾನುಶಾಲಿ ಮತ್ತು ಸಂದೀಪ್‌ ಸಿಂಗ್‌ ಜತೆಯಾಗಿದ್ದಾರೆ. ಈ ಸಿನಿಮಾ ವಾಜಪೇಯಿ ಅವರ ಬದುಕನ್ನು ಆಧರಿಸಿ ಬರೆದ ‘ಅನ್‌ಟೋಲ್ಡ್‌ ವಾಜಪೇಯಿ: ದಿ ಪೊಲಿಟಿಶಿಯನ್‌ ಆ್ಯಂಡ್‌ ಪ್ಯಾರಡಾಕ್ಸ್‌’ ಎಂಬ ಪುಸ್ತಕವನ್ನು ಅಧರಿಸಿದೆ. ಈ ಪುಸ್ತಕವನ್ನು ಲೇಖಕ ಉಲ್ಲೇಖ್‌ ಅವರು ಬರೆದಿದ್ದಾರೆ. ಸದ್ಯಕ್ಕೆ ವಿನೋದ್‌ ಭಾನುಶಾಲಿ ಮತ್ತು ಸಂದೀಪ್‌ ಸಿಂಗ್‌ ಈ ಪುಸ್ತಕದ ಹಕ್ಕುಗಳನ್ನು ಖರೀದಿಸಿದ್ದಾರೆ. ಸಿನಿಮಾಗೆ ‘ಅಟಲ್‌’ ಎಂದು ಹೆಸರಿಟ್ಟಿದ್ದು, ನಿರ್ದೇಶಕರು ಯಾರು ಎಂಬುದಿನ್ನೂ ಫೈನಲ್‌ ಮಾಡಿಲ್ಲ. ಅಲ್ಲದೆ, ಅಟಲ್‌ ಬಿಹಾರಿ ವಾಜಪೇಯಿ ಅವರ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬುದನ್ನು ಕೂಡ ಚಿತ್ರತಂಡ ಬಹಿರಂಗಪಡಿಸಿಲ್ಲ.

ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಸಂದೀಪ್ ಸಿಂಗ್, ಈ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಭಾರತೀಯ ಇತಿಹಾಸ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಅವರು ತಮ್ಮ ಮಾತುಗಳಿಂದ ಶತ್ರುಗಳ ಹೃದಯವನ್ನು ಗೆದ್ದಂಥವರು. ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಿದವರು. ಸಿನಿಮಾದಲ್ಲಿ ಯಾವಾಗಲೂ ಜನರಿಗೆ ಗೊತ್ತಿಲ್ಲದ ಕಥೆಗಳನ್ನು ಹೇಳಬೇಕು ಎಂಬುದು ನನ್ನ ಆಸೆ. ಈ ಸಿನಿಮಾದಲ್ಲಿ ಅದು ಆಗಲಿದೆ. ವಾಜಪೇಯಿ ಅವರ ರಾಜಕೀಯ ಸಿದ್ಧಾಂತಗಳನ್ನು ಮಾತ್ರವಲ್ಲದೆ ಅವರ ಮಾನವೀಯ ಮತ್ತು ಕಾವ್ಯಾತ್ಮಕ ಅಂಶಗಳನ್ನು ಇಲ್ಲಿ ಅನಾವರಣಗೊಳಿಸುವ ಉದ್ದೇಶ ಇಟ್ಟುಕೊಂಡಿದ್ದೇವೆ’ಎಂದು ನಿರ್ಮಾಪಕ ಸಂದೀಪ್‌ ಸಿಂಗ್‌ ಹೇಳಿದ್ದಾರೆ.

2023ರ ಆರಂಭದಲ್ಲಿ ‘ಅಟಲ್’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. 2023ರ ಕ್ರಿಸ್‌ಮಸ್‌ಗೆ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ. 2023ರ ಡಿ.25ರಂದು ಅಟಲ್‌ ಬಿಹಾರಿ ವಾಜಪೇಯಿ ಅವರ 99ನೇ ಜನ್ಮ ಜಯಂತಿ. ಅಂದೇ ಸಿನಿಮಾವನ್ನು ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ವಿನೋದ್ ಭಾನುಶಾಲಿ, ಸಂದೀಪ್ ಸಿಂಗ್ ಜೊತೆಗೆ ಸ್ಯಾಮ್ ಖಾನ್, ಕಮಲೇಶ್‌ ಭಾನುಶಾಲಿ, ವಿಶಾಲ್ ಗುರ್ನಾನಿ, ಜೀಶಾನ್ ಅಹ್ಮದ್, ಶಿವ್‌ ಶರ್ಮಾ, ಜೂಹಿ ಪರೇಖ್ ಮೆಹ್ತಾ ಅವರು ಕೂಡ ಚಿತ್ರಕ್ಕೆ ನಿರ್ಮಾಪಕರಾಗಿದ್ದಾರೆ. ಅಂದಹಾಗೆ, ಈ ಹಿಂದೆ ನರೇಂದ್ರ ಮೋದಿ ಬಯೋಪಿಕ್ ಅನ್ನು ಸಂದೀಪ್ ಸಿಂಗ್ ನಿರ್ಮಾಣ ಮಾಡಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

8 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

9 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

9 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

9 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

10 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

11 hours ago