Featured

ಮಾಜಿ ಬಿಜೆಪಿ ಸಂಸದ ಶರದ್ ತ್ರಿಪಾಠಿ ನಿಧನ ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಅಮಿತ್ ಶಾ -Vishwanews24

ಮಾಜಿ ಬಿಜೆಪಿ ಸಂಸದ ಶರದ್ ತ್ರಿಪಾಠಿ ನಿಧನ ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಅಮಿತ್ ಶಾ -Vishwanews24

ನವದೆಹಲಿ: ಬಿಜೆಪಿಯ ಮಾಜಿ ಸಂಸದ ಶರದ್ ತ್ರಿಪಾಠಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಲಿವರ್ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ತ್ರಿಪಾಠಿ(49) ಬುಧವಾರ ರಾತ್ರಿ ಮೃತಪಟ್ಟಿದ್ದಾರೆ ಹರ್ಯಾಣದ ಮೇದಾಂತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತ್ರಿಪಾಠಿ 2014ರಲ್ಲಿ ಉತ್ತರ ಪ್ರದೇಶದ ಸಂತ ಕಬೀರ್ ನಗರದ ಲೋಕಸಭಾ ಸ್ಥಾನದಿಂದ ಸಂಸತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದರು.

2019ರ ಲೋಕಸಭಾ ಚುನಾವಣೆಗೆ ಮುನ್ನ ಸಭೆ ನಡೆಯುತ್ತಿದ್ದಾಗ ಮೆನ್ಡಾವಲ್ ಬಿಜೆಪಿ ಶಾಸಕ ರಾಕೇಶ್ ಸಿಂಗ್ ಶೂನಿಂದ ಹೊಡೆದಿದ್ದರಿಂದ ಇವರ ಹೆಸರು ಚರ್ಚೆಯಾಗಿತ್ತು. ಸದ್ಯ ತ್ರಿಪಾಠಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.

ಶರದ್ ತ್ರಿಪಾಠಿಯವರ ಅಕಾಲಿಕ ನಿಧನವು ನನ್ನನ್ನು ಮಾತ್ರವಲ್ಲದೇ ಇನ್ನೂ ಅನೇಕರಿಗೆ ದುಃಖ ತರಿಸಿದೆ. ಅವರು ಸಮಾಜಕ್ಕೆ ಸೇವೆ ಸಲ್ಲಿಸುವ ಹಾಗೂ ದೀನ ದಲಿತರಿಗಾಗಿ ಕೆಲಸ ಮಾಡುಲು ಇಷ್ಟಪಟ್ಟವರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಅವರ ಸಾವನ್ನು ತಡೆಕೊಳ್ಳುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ.

 

 

 

 

 

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

5 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

6 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago