Featured

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆ ; ಪೊಲೀಸರಿಂದ ತೀವ್ರ ಶೋಧ -Vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.

ಬೆಂಗಳೂರು ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿದ್ದ ಸಿದ್ದಾರ್ಥ್‌ ನೇತ್ರಾವತಿ ಸೇತುವೆ ಮೇಲೆ ತೆರಳುತ್ತಿದ್ದಾಗ ಕಡೆಕಾರು ರಸ್ತೆಯಲ್ಲಿ ಹೋಗುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರು ನಿಲ್ಲಿಸಲು ಹೇಳಿ, ಮೊಬೈಲ್’ನಲ್ಲಿ ಮಾತನಾಡುತ್ತಾ ಕಾರಿನಿಂದ ಇಳಿದು ಮುಂದಕ್ಕೆ ಹೋಗಿದ್ದಾರೆ. ಆ ಬಳಿಕ ನಾಪತ್ತೆ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಸಿದ್ಧಾರ್ಥ ಅವರು ಸೇತುವೆಯ ಮಧ್ಯಭಾಗದಿಂದ ನದಿಗೆ ಹಾರಿರಬಹುದೆಂದು ಶಂಕೆ ಹಿನ್ನೆಲೆಯಲ್ಲಿ ದೇಹಕ್ಕಾಗಿ ಬೋಟ್’ಗಳಲ್ಲಿ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಬಸವರಾಜ್, ಸಾಹೇಬ್ರು ಇಂಗ್ಲಿಷ್’ನಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ನನಗೆ ಅರ್ಥವಾಗಲಿಲ್ಲ ಎಂದು ಹೇಳಿದ್ದಾರೆ.

ಸಿದ್ಧಾರ್ಥ್ ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದು, ಮೊಬೈಲ್’ನಲ್ಲಿ ಮಾತನಾಡಿಕೊಂಡು ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸವರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದರು, ಆದರೆ ಸಿದ್ಧಾರ್ಥ್ ಡೈವರ್’ಗೆ ಹಿಂದೆ ಬರದಂತೆ ಹೇಳಿದ್ದಾರೆ ಎನ್ನಲಾಗಿದೆ.

ತಮ್ಮ ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ್ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ. ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

4 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago