Featured

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆ ; ಪೊಲೀಸರಿಂದ ತೀವ್ರ ಶೋಧ -Vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.

ಬೆಂಗಳೂರು ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿದ್ದ ಸಿದ್ದಾರ್ಥ್‌ ನೇತ್ರಾವತಿ ಸೇತುವೆ ಮೇಲೆ ತೆರಳುತ್ತಿದ್ದಾಗ ಕಡೆಕಾರು ರಸ್ತೆಯಲ್ಲಿ ಹೋಗುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರು ನಿಲ್ಲಿಸಲು ಹೇಳಿ, ಮೊಬೈಲ್’ನಲ್ಲಿ ಮಾತನಾಡುತ್ತಾ ಕಾರಿನಿಂದ ಇಳಿದು ಮುಂದಕ್ಕೆ ಹೋಗಿದ್ದಾರೆ. ಆ ಬಳಿಕ ನಾಪತ್ತೆ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಸಿದ್ಧಾರ್ಥ ಅವರು ಸೇತುವೆಯ ಮಧ್ಯಭಾಗದಿಂದ ನದಿಗೆ ಹಾರಿರಬಹುದೆಂದು ಶಂಕೆ ಹಿನ್ನೆಲೆಯಲ್ಲಿ ದೇಹಕ್ಕಾಗಿ ಬೋಟ್’ಗಳಲ್ಲಿ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಬಸವರಾಜ್, ಸಾಹೇಬ್ರು ಇಂಗ್ಲಿಷ್’ನಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ನನಗೆ ಅರ್ಥವಾಗಲಿಲ್ಲ ಎಂದು ಹೇಳಿದ್ದಾರೆ.

ಸಿದ್ಧಾರ್ಥ್ ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದು, ಮೊಬೈಲ್’ನಲ್ಲಿ ಮಾತನಾಡಿಕೊಂಡು ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸವರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದರು, ಆದರೆ ಸಿದ್ಧಾರ್ಥ್ ಡೈವರ್’ಗೆ ಹಿಂದೆ ಬರದಂತೆ ಹೇಳಿದ್ದಾರೆ ಎನ್ನಲಾಗಿದೆ.

ತಮ್ಮ ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ್ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ. ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago