ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.
ಬೆಂಗಳೂರು ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿದ್ದ ಸಿದ್ದಾರ್ಥ್ ನೇತ್ರಾವತಿ ಸೇತುವೆ ಮೇಲೆ ತೆರಳುತ್ತಿದ್ದಾಗ ಕಡೆಕಾರು ರಸ್ತೆಯಲ್ಲಿ ಹೋಗುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರು ನಿಲ್ಲಿಸಲು ಹೇಳಿ, ಮೊಬೈಲ್’ನಲ್ಲಿ ಮಾತನಾಡುತ್ತಾ ಕಾರಿನಿಂದ ಇಳಿದು ಮುಂದಕ್ಕೆ ಹೋಗಿದ್ದಾರೆ. ಆ ಬಳಿಕ ನಾಪತ್ತೆ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಸಿದ್ಧಾರ್ಥ ಅವರು ಸೇತುವೆಯ ಮಧ್ಯಭಾಗದಿಂದ ನದಿಗೆ ಹಾರಿರಬಹುದೆಂದು ಶಂಕೆ ಹಿನ್ನೆಲೆಯಲ್ಲಿ ದೇಹಕ್ಕಾಗಿ ಬೋಟ್’ಗಳಲ್ಲಿ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಬಸವರಾಜ್, ಸಾಹೇಬ್ರು ಇಂಗ್ಲಿಷ್’ನಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ನನಗೆ ಅರ್ಥವಾಗಲಿಲ್ಲ ಎಂದು ಹೇಳಿದ್ದಾರೆ.
ಸಿದ್ಧಾರ್ಥ್ ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದು, ಮೊಬೈಲ್’ನಲ್ಲಿ ಮಾತನಾಡಿಕೊಂಡು ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸವರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದರು, ಆದರೆ ಸಿದ್ಧಾರ್ಥ್ ಡೈವರ್’ಗೆ ಹಿಂದೆ ಬರದಂತೆ ಹೇಳಿದ್ದಾರೆ ಎನ್ನಲಾಗಿದೆ.
ತಮ್ಮ ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ್ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ. ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ.
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…