ಬೆಂಗಳೂರು: ಮಾಜಿ ಶಾಸಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯರು ಆಗಿರುವ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಅವರಿಗೆ ಗುಂಡಿಕ್ಕಿ ಕೊಲ್ಲುವುದಾಗಿ ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ.
ಡಿ. 5 ರಂದು ಅನಿಲ್ ಲಾಡ್ ಅವರಿಗೆ ಮೊಬೈಲ್ ಮೂಲಕ ಮೆಸೇಜ್ ಮಾಡಿರುವ ಪಾತಕಿ, ಹಣಕಾಸು ಸಂಬಂಧ ಬೆದರಿಕೆ ಹಾಕಿದ್ದಾನೆ. ಅನಿಲ್ ಲಾಡ್ ವ್ಯವಹಾರಿಕ ಸಂಬಂಧದ ಹಿನ್ನೆಲೆಯಲ್ಲಿ ನಗರದ ಶಿವಕುಮಾರ್ ಎಂಬುವರ ವಿರುದ್ಧ ದೂರು ದಾಖಲಿಸಿದ್ದರು.
ರವಿ ಪೂಜಾರಿ ಹೆಸರಿನಲ್ಲಿ ಅಂತರಾಷ್ಟ್ರೀಯ ನಂಬರ್ನಿಂದ ಬಂದಿರುವ ಮೆಸೇಜ್ನಲ್ಲಿ ಶಿವಕುಮಾರ್ ನೀಡಬೇಕಿದ್ದ ಹಣ ಮರೆತು ಬಿಡಿ. ಇಲ್ಲವಾದರೆ ನಿನ್ನನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ರವಿ ಪೂಜಾರಿ ಬೆದರಿಕೆ ಹಾಕಿದ್ದಾನೆ. ಸದ್ಯ ಅನಿಲ್ ಲಾಡ್ ಗೃಹ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಪ್ರಕರಣದ ಕುರಿತು ತನಿಖೆಯನ್ನು ಮಾಡುವಂತೆ ಮನವಿ ಮಾಡಿದ್ದಾರೆ.ಗೃಹ ಸಚಿವರು ಪೊಲೀಸ್ ಇಲಾಖೆಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…