ಬೆಂಗಳೂರು: ಮಾಜಿ ಶಾಸಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯರು ಆಗಿರುವ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಅವರಿಗೆ ಗುಂಡಿಕ್ಕಿ ಕೊಲ್ಲುವುದಾಗಿ ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ.
ಡಿ. 5 ರಂದು ಅನಿಲ್ ಲಾಡ್ ಅವರಿಗೆ ಮೊಬೈಲ್ ಮೂಲಕ ಮೆಸೇಜ್ ಮಾಡಿರುವ ಪಾತಕಿ, ಹಣಕಾಸು ಸಂಬಂಧ ಬೆದರಿಕೆ ಹಾಕಿದ್ದಾನೆ. ಅನಿಲ್ ಲಾಡ್ ವ್ಯವಹಾರಿಕ ಸಂಬಂಧದ ಹಿನ್ನೆಲೆಯಲ್ಲಿ ನಗರದ ಶಿವಕುಮಾರ್ ಎಂಬುವರ ವಿರುದ್ಧ ದೂರು ದಾಖಲಿಸಿದ್ದರು.
ರವಿ ಪೂಜಾರಿ ಹೆಸರಿನಲ್ಲಿ ಅಂತರಾಷ್ಟ್ರೀಯ ನಂಬರ್ನಿಂದ ಬಂದಿರುವ ಮೆಸೇಜ್ನಲ್ಲಿ ಶಿವಕುಮಾರ್ ನೀಡಬೇಕಿದ್ದ ಹಣ ಮರೆತು ಬಿಡಿ. ಇಲ್ಲವಾದರೆ ನಿನ್ನನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ರವಿ ಪೂಜಾರಿ ಬೆದರಿಕೆ ಹಾಕಿದ್ದಾನೆ. ಸದ್ಯ ಅನಿಲ್ ಲಾಡ್ ಗೃಹ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಪ್ರಕರಣದ ಕುರಿತು ತನಿಖೆಯನ್ನು ಮಾಡುವಂತೆ ಮನವಿ ಮಾಡಿದ್ದಾರೆ.ಗೃಹ ಸಚಿವರು ಪೊಲೀಸ್ ಇಲಾಖೆಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ..
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…