ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿ (BJP) ಸೇರ್ಪಡೆಯಾದರು.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕಟೀಲ್ ಮತ್ತು ಸಿಎಂ ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ ಸದಸ್ಯರಾಗಿದ್ದ ವೆಂಕಟಾಚಲ, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ ಬಿಜೆಪಿ ಸೇರ್ಪಡೆ ಆದರು. ರಮೇಶ್ ಮುನಿಯಪ್ಪ ಮಾಜಿ ಸಿಎಂ ಶೀಲಾ ದಿಕ್ಷೀತ್ರಿಗೆ ವಿಶೇಷ ಕರ್ತವ್ಯಾಧಿಕಾರಿ ಆಗಿದ್ದರು.
ಮಲ್ಪೆ: ಬಂದರಿನಲ್ಲಿ ಮೀನು ಆಯುತಿದ್ದ 16 ಅಪ್ರಾಪ್ತ ಮಕ್ಕಳ ರಕ್ಷಣೆ – Vishwanews24
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದ ರಾಜಕಾರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ. ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡು ಅಧಿಕಾರ ಕಳೆದುಕೊಳ್ಳುತ್ತಿದೆ. ಈಗ ಕಾಂಗ್ರೆಸ್ಗೆ ಜನಮತ ಇಲ್ಲ. ಬಹುತೇಕ ಸಚಿವರು ಸೋತಿದ್ದರು. ಆದರೂ ಕಾಂಗ್ರೆಸ್ ಹಿಂಬಾಗಿಲಿಂದ ಅಧಿಕಾರ ಪಡೆದಿತ್ತು. ಆದರೆ ಜೆಡಿಎಸ್ ಜತೆಗಿನ ಸಮ್ಮಿಶ್ರ ಸರ್ಕಾರದ ಪ್ರಯೋಗ ವಿಫಲವಾಯಿತು. ನಂತರ ಬಿಜೆಪಿ ಅಧಿಕಾರಕ್ಕೇರಿ ಜನಮನ್ನಣೆ ಪಡೆದಿದೆ. ಬಿಜೆಪಿ ಪರ ಸಂಪೂರ್ಣ ದಿಕ್ಸೂಚಿ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಜನಸಂಕಲ್ಪ ಯಾತ್ರೆಗಳಿಗೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ. ಕಾಂಗ್ರೆಸ್ನ ಹಲವು ನಾಯಕರಿಗೆ ಅಲ್ಲಿ ಸೇವೆ ಮಾಡಿದ್ರೂ ಬೆಲೆ ಸಿಗುತ್ತಿದೆ. ಹಲವರಿಗೆ ಕಾಂಗ್ರೆಸ್ನಲ್ಲಿ ಬೆಲೆ ಸಿಕ್ತಿಲ್ಲ ಅಂಥ ನಾಯಕರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಿಜೆಪಿಗೆ ಸೇರುತ್ತಿದ್ದಾರೆ. ಹಲವರು ಭ್ರಮನಿರಸನಗೊಂಡು ನಮ್ಮ ಪಕ್ಷ ಸೇರಿದ್ದಾರೆ ಎಂದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಶೇಖರ್ ಹೃದಯಾಘಾತದಿಂದ ನಿಧನ – Vishwanews24
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…