ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿ (BJP) ಸೇರ್ಪಡೆಯಾದರು.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕಟೀಲ್ ಮತ್ತು ಸಿಎಂ ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ ಸದಸ್ಯರಾಗಿದ್ದ ವೆಂಕಟಾಚಲ, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ ಬಿಜೆಪಿ ಸೇರ್ಪಡೆ ಆದರು. ರಮೇಶ್ ಮುನಿಯಪ್ಪ ಮಾಜಿ ಸಿಎಂ ಶೀಲಾ ದಿಕ್ಷೀತ್ರಿಗೆ ವಿಶೇಷ ಕರ್ತವ್ಯಾಧಿಕಾರಿ ಆಗಿದ್ದರು.
ಮಲ್ಪೆ: ಬಂದರಿನಲ್ಲಿ ಮೀನು ಆಯುತಿದ್ದ 16 ಅಪ್ರಾಪ್ತ ಮಕ್ಕಳ ರಕ್ಷಣೆ – Vishwanews24
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದ ರಾಜಕಾರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ. ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡು ಅಧಿಕಾರ ಕಳೆದುಕೊಳ್ಳುತ್ತಿದೆ. ಈಗ ಕಾಂಗ್ರೆಸ್ಗೆ ಜನಮತ ಇಲ್ಲ. ಬಹುತೇಕ ಸಚಿವರು ಸೋತಿದ್ದರು. ಆದರೂ ಕಾಂಗ್ರೆಸ್ ಹಿಂಬಾಗಿಲಿಂದ ಅಧಿಕಾರ ಪಡೆದಿತ್ತು. ಆದರೆ ಜೆಡಿಎಸ್ ಜತೆಗಿನ ಸಮ್ಮಿಶ್ರ ಸರ್ಕಾರದ ಪ್ರಯೋಗ ವಿಫಲವಾಯಿತು. ನಂತರ ಬಿಜೆಪಿ ಅಧಿಕಾರಕ್ಕೇರಿ ಜನಮನ್ನಣೆ ಪಡೆದಿದೆ. ಬಿಜೆಪಿ ಪರ ಸಂಪೂರ್ಣ ದಿಕ್ಸೂಚಿ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಜನಸಂಕಲ್ಪ ಯಾತ್ರೆಗಳಿಗೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ. ಕಾಂಗ್ರೆಸ್ನ ಹಲವು ನಾಯಕರಿಗೆ ಅಲ್ಲಿ ಸೇವೆ ಮಾಡಿದ್ರೂ ಬೆಲೆ ಸಿಗುತ್ತಿದೆ. ಹಲವರಿಗೆ ಕಾಂಗ್ರೆಸ್ನಲ್ಲಿ ಬೆಲೆ ಸಿಕ್ತಿಲ್ಲ ಅಂಥ ನಾಯಕರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಿಜೆಪಿಗೆ ಸೇರುತ್ತಿದ್ದಾರೆ. ಹಲವರು ಭ್ರಮನಿರಸನಗೊಂಡು ನಮ್ಮ ಪಕ್ಷ ಸೇರಿದ್ದಾರೆ ಎಂದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಶೇಖರ್ ಹೃದಯಾಘಾತದಿಂದ ನಿಧನ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…