Featured

ಮಾಜಿ ಸಂಸದ ಮುದ್ದಹನುಮೇಗೌಡ, ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ – Vishwanews24

ಮಾಜಿ ಸಂಸದ ಮುದ್ದಹನುಮೇಗೌಡ, ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿ (BJP) ಸೇರ್ಪಡೆಯಾದರು.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕಟೀಲ್ ಮತ್ತು ಸಿಎಂ ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ ಸದಸ್ಯರಾಗಿದ್ದ ವೆಂಕಟಾಚಲ, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ ಬಿಜೆಪಿ ಸೇರ್ಪಡೆ ಆದರು. ರಮೇಶ್‌ ಮುನಿಯಪ್ಪ ಮಾಜಿ ಸಿಎಂ ಶೀಲಾ ದಿಕ್ಷೀತ್‌ರಿಗೆ ವಿಶೇಷ ಕರ್ತವ್ಯಾಧಿಕಾರಿ ಆಗಿದ್ದರು.

ಮಲ್ಪೆ: ಬಂದರಿನಲ್ಲಿ ಮೀನು ಆಯುತಿದ್ದ 16 ಅಪ್ರಾಪ್ತ ಮಕ್ಕಳ ರಕ್ಷಣೆ – Vishwanews24

ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದ ರಾಜಕಾರಣ‌ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ. ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡು ಅಧಿಕಾರ ಕಳೆದುಕೊಳ್ಳುತ್ತಿದೆ. ಈಗ ಕಾಂಗ್ರೆಸ್‌ಗೆ ಜನಮತ ಇಲ್ಲ. ಬಹುತೇಕ ಸಚಿವರು ಸೋತಿದ್ದರು. ಆದರೂ ಕಾಂಗ್ರೆಸ್ ಹಿಂಬಾಗಿಲಿಂದ ಅಧಿಕಾರ ಪಡೆದಿತ್ತು. ಆದರೆ ಜೆಡಿಎಸ್ ಜತೆಗಿನ ಸಮ್ಮಿಶ್ರ ಸರ್ಕಾರದ ಪ್ರಯೋಗ ವಿಫಲವಾಯಿತು. ನಂತರ ಬಿಜೆಪಿ ಅಧಿಕಾರಕ್ಕೇರಿ ಜನಮನ್ನಣೆ ಪಡೆದಿದೆ. ಬಿಜೆಪಿ ಪರ ಸಂಪೂರ್ಣ ದಿಕ್ಸೂಚಿ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದಲ್ಲಿ ಜನಸಂಕಲ್ಪ ಯಾತ್ರೆಗಳಿಗೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ. ಕಾಂಗ್ರೆಸ್‌ನ ಹಲವು ನಾಯಕರಿಗೆ ಅಲ್ಲಿ ಸೇವೆ ಮಾಡಿದ್ರೂ ಬೆಲೆ ಸಿಗುತ್ತಿದೆ. ಹಲವರಿಗೆ ಕಾಂಗ್ರೆಸ್‌ನಲ್ಲಿ ಬೆಲೆ ಸಿಕ್ತಿಲ್ಲ ಅಂಥ ನಾಯಕರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಿಜೆಪಿಗೆ ಸೇರುತ್ತಿದ್ದಾರೆ. ಹಲವರು ಭ್ರಮನಿರಸನಗೊಂಡು ನಮ್ಮ ಪಕ್ಷ ಸೇರಿದ್ದಾರೆ ಎಂದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಶೇಖರ್ ಹೃದಯಾಘಾತದಿಂದ ನಿಧನ – Vishwanews24

Vishwa News 24

Recent Posts

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

5 minutes ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

11 minutes ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

16 minutes ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

24 minutes ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

57 minutes ago

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

20 hours ago