ಉಡುಪಿ: ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾರ್ಕಳ ವಿಧಾನಸಭಾ ಕಾಂಗ್ರೆಸ್ನ ಒಳ ಜಗಳ ವಿಪರೀತಕ್ಕೇರಿದೆ. ವೀರಪ್ಪ ಮೊಯ್ಲಿ ಬಣ ಮತ್ತು ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯಕುಮಾರ್ ಶೆಟ್ಟಿ ಬಣದ ಕಿತ್ತಾಟ ಜೋರಾಗಿದೆ. ಇದರ ನಡುವೆ ವೀರಪ್ಪ ಮೊಯ್ಲಿ ಮತ್ತು ಅಭ್ಯರ್ಥಿ ಗೋಪಾಲ ಪೂಜಾರಿಯವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ನಡೆದಿದೆ.
ವೀರಪ್ಪ ಮೊಯ್ಲಿಯವರ ಜನನ ದಿನಾಂಕ ಮತ್ತು ಟಿಕೆಟ್ ಘೋಷಣೆಯಾದ ಏಪ್ರಿಲ್ 15ರ ದಿನಾಂಕವನ್ನು ನಮೂದಿಸಿ ಮೊಯ್ಲಿ ಮರಣ ಹೊಂದಿದ್ದಾರೆ ಎಂದು ಬರೆಯಲಾಗಿದೆ. ಕೆಲ ಕಿಡಿಗೇಡಿಗಳು ಫೋಟೋಗಳನ್ನು ವಾಟ್ಸಪ್, ಫೇಸ್ ಬುಕ್ನಲ್ಲೂ ಹರಿಬಿಡುತ್ತಿದ್ದಾರೆ. ಈ ನಡುವೆ ಮುನಿಯಾಲು ಉದಯಕುಮಾರ್ ಶೆಟ್ಟಿ ಬೆಂಬಲಿಗರು ಗೋಪಾಲ ಭಂಡಾರಿಯವರ ಮನೆಗೆ ತೆರಳಿ ಕಣದಿಂದ ಹಿಂದೆ ಸರಿಯುವಂತೆ ಒತ್ತಾಯ ಮಾಡಿದ್ದಾರೆ.
ತಾವು ಬಿ ಫಾರಂ ಹಿಂದಕ್ಕೆ ನೀಡಿ, ಸ್ಪರ್ಧೆಯಿಂದ ಹಿಂದೆ ಸರಿಯದಿದ್ದರೆ ಬೂತ್ ನಲ್ಲಿ ಕಾರ್ಯಕರ್ತರು ಪ್ರಚಾರಕ್ಕೆ ಸಿಗದಂತೆ ಮಾಡುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ಮನೆಗೆ ತೆರಳಿ ಬಹಳ ಒತ್ತಡ ಹೇರಿದ್ದಾರೆ ಎಂದು ಗೋಪಾಲ ಭಂಡಾರಿ ಬೆಂಬಲಿಗರು ದೂರಿದ್ದಾರೆ. ಈ ಎರಡು ವಿಚಾರಗಳನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಭಂಡಾರಿ ಕಣ್ಣೀರಿಟ್ಟಿದ್ದಾರೆ. ಕಳೆದ 40 ವರ್ಷದ ರಾಜಕಾರಣದಲ್ಲಿ, 10 ವರ್ಷದ ಶಾಸಕತ್ವದಲ್ಲಿ ನಯಾ ಪೈಸೆ ಲಂಚದ ಹಣ ಪಡೆದಿಲ್ಲ. ಒಂದು ರೂಪಾಯಿಯನ್ನು ಯಾರಿಂದಲೂ ಪಡೆದಿಲ್ಲ. ನನಗೆ, ನಮ್ಮೆಲ್ಲರ ಮುಖಂಡ ವೀರಪ್ಪ ಮೊಯ್ಲಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅಪಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನ್ನ ಕುಟುಂಬಕ್ಕೆ, ಮಕ್ಕಳಿಗೆ- ಹೆಂಡತಿಗೆ ಹೀನಾಯವಾಗಿ ಬೈಯ್ಯಲಾಗುತ್ತಿದೆ ಎಂದು ಆರೋಪಿಸಿ ಕಣ್ಣೀರಿಟ್ಟಿದ್ದಾರೆ. ಪ್ರಚಾರದ ವೇಳೆ ಬೂತ್ ಸಭೆಯಲ್ಲಿ ಮಾತನಾಡಿದ ಗೋಪಾಲ ಭಂಡಾರಿಯವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಧಮ್ಕಿಗೆಲ್ಲ ನಾನು ಹೆದರೋದಿಲ್ಲ, ಭ್ರಷ್ಟಾಚಾರದಿಂದ ಮಾಡಿದ ಹಣ ನನ್ನಲ್ಲಿಲ್ಲ. ಸಾಲದಲ್ಲಿರುವ ನಾನು ಜನಸೇವೆ ಮಾಡುತ್ತೇನೆ ಎಂದು ಗೋಪಾಲ ಭಂಡಾರಿ ಹೇಳಿದ್ದಾರೆ. ಸದ್ಯ ಈ ವಿಚಾರ ಭಾರೀ ಚರ್ಚೆಯಲ್ಲಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಉದಯಕುಮಾರ್ ಶೆಟ್ಟಿ, ನನ್ನ ಬೆಂಬಲಿಗರು ಪರಿಸ್ಥಿತಿಯನ್ನು ಮನವರಿಗೆ ಮಾಡಿದ್ದಾರೆ. ನನಗೆ ಅವಕಾಶ ಮಾಡಿಕೊಡಿ ಎಂದು ಮನವರಿಗೆ ಮಾಡಿದ್ದಾರೆ. ಧಮ್ಕಿ ಹಾಕುವ ಕೆಲಸ ಮಾಡಿಲ್ಲ ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…