ಉಡುಪಿ: ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾರ್ಕಳ ವಿಧಾನಸಭಾ ಕಾಂಗ್ರೆಸ್ನ ಒಳ ಜಗಳ ವಿಪರೀತಕ್ಕೇರಿದೆ. ವೀರಪ್ಪ ಮೊಯ್ಲಿ ಬಣ ಮತ್ತು ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯಕುಮಾರ್ ಶೆಟ್ಟಿ ಬಣದ ಕಿತ್ತಾಟ ಜೋರಾಗಿದೆ. ಇದರ ನಡುವೆ ವೀರಪ್ಪ ಮೊಯ್ಲಿ ಮತ್ತು ಅಭ್ಯರ್ಥಿ ಗೋಪಾಲ ಪೂಜಾರಿಯವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ನಡೆದಿದೆ.
ವೀರಪ್ಪ ಮೊಯ್ಲಿಯವರ ಜನನ ದಿನಾಂಕ ಮತ್ತು ಟಿಕೆಟ್ ಘೋಷಣೆಯಾದ ಏಪ್ರಿಲ್ 15ರ ದಿನಾಂಕವನ್ನು ನಮೂದಿಸಿ ಮೊಯ್ಲಿ ಮರಣ ಹೊಂದಿದ್ದಾರೆ ಎಂದು ಬರೆಯಲಾಗಿದೆ. ಕೆಲ ಕಿಡಿಗೇಡಿಗಳು ಫೋಟೋಗಳನ್ನು ವಾಟ್ಸಪ್, ಫೇಸ್ ಬುಕ್ನಲ್ಲೂ ಹರಿಬಿಡುತ್ತಿದ್ದಾರೆ. ಈ ನಡುವೆ ಮುನಿಯಾಲು ಉದಯಕುಮಾರ್ ಶೆಟ್ಟಿ ಬೆಂಬಲಿಗರು ಗೋಪಾಲ ಭಂಡಾರಿಯವರ ಮನೆಗೆ ತೆರಳಿ ಕಣದಿಂದ ಹಿಂದೆ ಸರಿಯುವಂತೆ ಒತ್ತಾಯ ಮಾಡಿದ್ದಾರೆ.
ತಾವು ಬಿ ಫಾರಂ ಹಿಂದಕ್ಕೆ ನೀಡಿ, ಸ್ಪರ್ಧೆಯಿಂದ ಹಿಂದೆ ಸರಿಯದಿದ್ದರೆ ಬೂತ್ ನಲ್ಲಿ ಕಾರ್ಯಕರ್ತರು ಪ್ರಚಾರಕ್ಕೆ ಸಿಗದಂತೆ ಮಾಡುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ಮನೆಗೆ ತೆರಳಿ ಬಹಳ ಒತ್ತಡ ಹೇರಿದ್ದಾರೆ ಎಂದು ಗೋಪಾಲ ಭಂಡಾರಿ ಬೆಂಬಲಿಗರು ದೂರಿದ್ದಾರೆ. ಈ ಎರಡು ವಿಚಾರಗಳನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಭಂಡಾರಿ ಕಣ್ಣೀರಿಟ್ಟಿದ್ದಾರೆ. ಕಳೆದ 40 ವರ್ಷದ ರಾಜಕಾರಣದಲ್ಲಿ, 10 ವರ್ಷದ ಶಾಸಕತ್ವದಲ್ಲಿ ನಯಾ ಪೈಸೆ ಲಂಚದ ಹಣ ಪಡೆದಿಲ್ಲ. ಒಂದು ರೂಪಾಯಿಯನ್ನು ಯಾರಿಂದಲೂ ಪಡೆದಿಲ್ಲ. ನನಗೆ, ನಮ್ಮೆಲ್ಲರ ಮುಖಂಡ ವೀರಪ್ಪ ಮೊಯ್ಲಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅಪಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನ್ನ ಕುಟುಂಬಕ್ಕೆ, ಮಕ್ಕಳಿಗೆ- ಹೆಂಡತಿಗೆ ಹೀನಾಯವಾಗಿ ಬೈಯ್ಯಲಾಗುತ್ತಿದೆ ಎಂದು ಆರೋಪಿಸಿ ಕಣ್ಣೀರಿಟ್ಟಿದ್ದಾರೆ. ಪ್ರಚಾರದ ವೇಳೆ ಬೂತ್ ಸಭೆಯಲ್ಲಿ ಮಾತನಾಡಿದ ಗೋಪಾಲ ಭಂಡಾರಿಯವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಧಮ್ಕಿಗೆಲ್ಲ ನಾನು ಹೆದರೋದಿಲ್ಲ, ಭ್ರಷ್ಟಾಚಾರದಿಂದ ಮಾಡಿದ ಹಣ ನನ್ನಲ್ಲಿಲ್ಲ. ಸಾಲದಲ್ಲಿರುವ ನಾನು ಜನಸೇವೆ ಮಾಡುತ್ತೇನೆ ಎಂದು ಗೋಪಾಲ ಭಂಡಾರಿ ಹೇಳಿದ್ದಾರೆ. ಸದ್ಯ ಈ ವಿಚಾರ ಭಾರೀ ಚರ್ಚೆಯಲ್ಲಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಉದಯಕುಮಾರ್ ಶೆಟ್ಟಿ, ನನ್ನ ಬೆಂಬಲಿಗರು ಪರಿಸ್ಥಿತಿಯನ್ನು ಮನವರಿಗೆ ಮಾಡಿದ್ದಾರೆ. ನನಗೆ ಅವಕಾಶ ಮಾಡಿಕೊಡಿ ಎಂದು ಮನವರಿಗೆ ಮಾಡಿದ್ದಾರೆ. ಧಮ್ಕಿ ಹಾಕುವ ಕೆಲಸ ಮಾಡಿಲ್ಲ ಎಂದಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…