ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಎದುರು ನಿಂತು ಬಡಿದಾಡುವ ಶತ್ರುವಾದರೆ ಹೇಗೋ ಎದುರಿಸಬಹುದು. ಆದರೆ ಹೀಗೆ ಕಣ್ಣಿಗೆ ಕಾಣದ ಸಮಸ್ಯೆ ಎದುರಿಸುವುದು ಹೇಗೆ?
ದುಷ್ಟಶಕ್ತಿ ಪ್ರಯೋಗ, ವಾಮಾಚಾರ ಪ್ರಯೋಗ ಇವೆಲ್ಲವನ್ನೂ ನಂಬದವರು ಹೆಚ್ಚು. ಆದರೆ ಕೆಲವು ಸಲ ಜ್ಯೋತಿಷ್ಯದಲ್ಲಿ ಸಮಸ್ಯೆ ಏನು ಎಂಬುದನ್ನು ಪತ್ತೆ ಮಾಡಲು ಆಗುವುದಿಲ್ಲ. ಹೆಚ್ಚು ಸ್ಪಷ್ಟವಾಗಿ ಹೇಳಬೇಕೆಂದರೆ, ಜಾತಕದಲ್ಲಿ ಯಾವುದೇ ಗ್ರಹದೋಷ- ಗೃಹ ವಾಸ್ತು ದೋಷ ಇಲ್ಲದಿದ್ದರೂ ತೊಂದರೆ ಆಗುತ್ತಿರುತ್ತದೆ. ಅದಕ್ಕೆ ಕೃತ್ರಿಮ ಪ್ರಯೋಗ ಆಗಿರುವ ಸಾಧ್ಯತೆ ಇರುತ್ತದೆ.ಬಹಳ ಜನಕ್ಕೆ ತಮ್ಮ ಮೇಲೆ ಪ್ರಯೋಗ ಆಗಿದೆ ಎಂಬ ಅನುಮಾನ ಮೂಡಿದರೂ ಹೇಳಿಕೊಳ್ಳಲು ಎಂಥದ್ದೋ ನಾಚಿಕೆ ಅಥವಾ ಸಂಕೋಚ ಇರುತ್ತದೆ. ಆದ್ದರಿಂದ ಈ ಲೇಖನದಲ್ಲಿ ಕೆಲವು ಲಕ್ಷಣಗಳನ್ನು ತಿಳಿಸಲಾಗುವುದು.ಇಂಥ ಸಮಸ್ಯೆ ಜಾತಕದಲ್ಲಿ ಗೊತ್ತಾಗುವುದಿಲ್ಲ ಎಂದು ಈಗಾಗಲೇ ಹೇಳಿಯಾಗಿದೆ. ಪ್ರಶ್ನಶಾಸ್ತ್ರದ ಮೂಲಕ ಅದನ್ನು ತಿಳಿದುಕೊಂಡು ಶಾಶ್ವತವಾದ ಪರಿಹಾರ ಮಾಡಬೇಕಾಗುತ್ತದೆ. ಇರಲಿ, ಮೊದಲಿಗೆ ವಾಮಾಚಾರ ಪ್ರಯೋಗ ಆಗಿರಬಹುದಾದ ಲಕ್ಷಣಗಳನ್ನು ತಿಳಿದುಕೊಳ್ಳಿ.
ಮುಖದಲ್ಲಿ ವಿಕಾರತೆ ವಾಮಾಚಾರ ಪ್ರಯೋಗ ಆಗಿದೆ ಅಂದರೆ ದೈಹಿಕ ಬದಲಾವಣೆಗಳು ಮೊದಲ ಹಂತದಲ್ಲೇ ಗೋಚರವಾಗುತ್ತದೆ. ವಿಪರೀತ ಕೂದಲು ಉದುರುತ್ತದೆ. ಮುಖದಲ್ಲೊಂದು ವಿಕಾರತೆ ಕಾಣಿಸುತ್ತದೆ. ನಿತ್ಯವೂ ಗಮನಿಸುವವರಿಗೆ ಈ ಬದಲಾವಣೆ ಬಹಳ ಬೇಗ ಗೊತ್ತಾಗುತ್ತದೆ. ಜೀವ ಕಳೆ ಅಂತ ಏನು ಹೇಳ್ತೀವಿ ಅದು ಇಲ್ಲದಂತಾಗುತ್ತದೆ.
ಮನೆಯಲ್ಲಿ ಬಳಕೆಯಾಗದ ಸ್ಥಳದಲ್ಲಿ ಪೊಟ್ಟಣ ಕಟ್ಟಿರುವಂತೆ ಕುಂಕುಮ, ಅರಿಶಿನ, ನಿಂಬೆಹಣ್ಣು, ಗೊಂಬೆ, ಭಸ್ಮ, ದಾರ ಸುತ್ತಿಟ್ಟ ಮಡಿಕೆ, ಸೂಜಿ ಚುಚ್ಚಿದ ವಸ್ತು, ಮೊಟ್ಟೆ, ಮೆಣಸಿನಕಾಯಿ ಪದೇಪದೇ ಸಿಕ್ಕರೆ ಖಂಡಿತಾ ಈ ಬಗ್ಗೆ ಒಂದು ಅನುಮಾನ ಮೂಡಬೇಕು. ಏಕೆಂದರೆ ಇವೆಲ್ಲ ವಸ್ತುಗಳು ಕೃತ್ರಿಮ ಪ್ರಯೋಗದ ಮುನ್ಸೂಚನೆಗಳು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…