ಮಾಟ- ವಾಮಾಚಾರ ಅಂದರೆ ಏನು…ಇದು ನಿಜವಾಗ್ಲೂ ಇದ್ಯಾ ..? ಅದರ ಲಕ್ಷಣಗಳು ಯಾವುದು ಇಲ್ಲಿದೆ ಓದಿ vishwanews24

ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಎದುರು ನಿಂತು ಬಡಿದಾಡುವ ಶತ್ರುವಾದರೆ ಹೇಗೋ ಎದುರಿಸಬಹುದು. ಆದರೆ ಹೀಗೆ ಕಣ್ಣಿಗೆ ಕಾಣದ ಸಮಸ್ಯೆ ಎದುರಿಸುವುದು ಹೇಗೆ?

ದುಷ್ಟಶಕ್ತಿ ಪ್ರಯೋಗ, ವಾಮಾಚಾರ ಪ್ರಯೋಗ ಇವೆಲ್ಲವನ್ನೂ ನಂಬದವರು ಹೆಚ್ಚು. ಆದರೆ ಕೆಲವು ಸಲ ಜ್ಯೋತಿಷ್ಯದಲ್ಲಿ ಸಮಸ್ಯೆ ಏನು ಎಂಬುದನ್ನು ಪತ್ತೆ ಮಾಡಲು ಆಗುವುದಿಲ್ಲ. ಹೆಚ್ಚು ಸ್ಪಷ್ಟವಾಗಿ ಹೇಳಬೇಕೆಂದರೆ, ಜಾತಕದಲ್ಲಿ ಯಾವುದೇ ಗ್ರಹದೋಷ- ಗೃಹ ವಾಸ್ತು ದೋಷ ಇಲ್ಲದಿದ್ದರೂ ತೊಂದರೆ ಆಗುತ್ತಿರುತ್ತದೆ. ಅದಕ್ಕೆ ಕೃತ್ರಿಮ ಪ್ರಯೋಗ ಆಗಿರುವ ಸಾಧ್ಯತೆ ಇರುತ್ತದೆ.ಬಹಳ ಜನಕ್ಕೆ ತಮ್ಮ ಮೇಲೆ ಪ್ರಯೋಗ ಆಗಿದೆ ಎಂಬ ಅನುಮಾನ ಮೂಡಿದರೂ ಹೇಳಿಕೊಳ್ಳಲು ಎಂಥದ್ದೋ ನಾಚಿಕೆ ಅಥವಾ ಸಂಕೋಚ ಇರುತ್ತದೆ. ಆದ್ದರಿಂದ ಈ ಲೇಖನದಲ್ಲಿ ಕೆಲವು ಲಕ್ಷಣಗಳನ್ನು ತಿಳಿಸಲಾಗುವುದು.ಇಂಥ ಸಮಸ್ಯೆ ಜಾತಕದಲ್ಲಿ ಗೊತ್ತಾಗುವುದಿಲ್ಲ ಎಂದು ಈಗಾಗಲೇ ಹೇಳಿಯಾಗಿದೆ. ಪ್ರಶ್ನಶಾಸ್ತ್ರದ ಮೂಲಕ ಅದನ್ನು ತಿಳಿದುಕೊಂಡು ಶಾಶ್ವತವಾದ ಪರಿಹಾರ ಮಾಡಬೇಕಾಗುತ್ತದೆ. ಇರಲಿ, ಮೊದಲಿಗೆ ವಾಮಾಚಾರ ಪ್ರಯೋಗ ಆಗಿರಬಹುದಾದ ಲಕ್ಷಣಗಳನ್ನು ತಿಳಿದುಕೊಳ್ಳಿ.

ಮುಖದಲ್ಲಿ ವಿಕಾರತೆ ವಾಮಾಚಾರ ಪ್ರಯೋಗ ಆಗಿದೆ ಅಂದರೆ ದೈಹಿಕ ಬದಲಾವಣೆಗಳು ಮೊದಲ ಹಂತದಲ್ಲೇ ಗೋಚರವಾಗುತ್ತದೆ. ವಿಪರೀತ ಕೂದಲು ಉದುರುತ್ತದೆ. ಮುಖದಲ್ಲೊಂದು ವಿಕಾರತೆ ಕಾಣಿಸುತ್ತದೆ. ನಿತ್ಯವೂ ಗಮನಿಸುವವರಿಗೆ ಈ ಬದಲಾವಣೆ ಬಹಳ ಬೇಗ ಗೊತ್ತಾಗುತ್ತದೆ. ಜೀವ ಕಳೆ ಅಂತ ಏನು ಹೇಳ್ತೀವಿ ಅದು ಇಲ್ಲದಂತಾಗುತ್ತದೆ.

ಮನೆಯಲ್ಲಿ ಬಳಕೆಯಾಗದ ಸ್ಥಳದಲ್ಲಿ ಪೊಟ್ಟಣ ಕಟ್ಟಿರುವಂತೆ ಕುಂಕುಮ, ಅರಿಶಿನ, ನಿಂಬೆಹಣ್ಣು, ಗೊಂಬೆ, ಭಸ್ಮ, ದಾರ ಸುತ್ತಿಟ್ಟ ಮಡಿಕೆ, ಸೂಜಿ ಚುಚ್ಚಿದ ವಸ್ತು, ಮೊಟ್ಟೆ, ಮೆಣಸಿನಕಾಯಿ ಪದೇಪದೇ ಸಿಕ್ಕರೆ ಖಂಡಿತಾ ಈ ಬಗ್ಗೆ ಒಂದು ಅನುಮಾನ ಮೂಡಬೇಕು. ಏಕೆಂದರೆ ಇವೆಲ್ಲ ವಸ್ತುಗಳು ಕೃತ್ರಿಮ ಪ್ರಯೋಗದ ಮುನ್ಸೂಚನೆಗಳು.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

22 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

23 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

24 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago