Featured

ಮಾಡರ್ನ್ ರೈತ ಶಶಿಗೆ BIG BOSS ಕಿರೀಟ – Vishwanews24

ಬೆಂಗಳೂರು: ಕಿಚ್ಚ ಸುದೀಪ್‌ ನಡೆಸಿಕೊಡುವ,ಕಲರ್ಸ್‌ ಸೂಪರ್‌ ವಾಹಿನಿಯಲ್ಲಿ ಪ್ರಸಾರವಾಗುವ  ಕನ್ನಡದ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 6 ಗ್ರ್ಯಾಂಡ್‌ ಫಿನಾಲೆ ಭಾನುವಾರ ರಾತ್ರಿ ಅಂತ್ಯವಾಗಿದ್ದು, ಮಾಡರ್ನ್ ರೈತ ಖ್ಯಾತಿಯ ಶಶಿ ಅವರು ವಿನ್ನರ್‌ ಆಗಿದ್ದಾರೆ.

ಫೈನಲ್‌ನಲ್ಲಿ  ನವೀನ್‌ ಸಜ್ಜು, ಶಶಿ ಮತ್ತು ಕವಿತಾ ಗೌಡ ಅವರ ನಡುವೆ ತೀವ್ರ ಪೈಪೋಟಿ ಇತ್ತು. ಕವಿತಾ ಗೌಡ ಅವರು ಮೊದಲು ಎಲಿಮಿನೇಟ್‌ ಆದರೆ , ನವೀನ್‌ ಫೈನಲ್‌ನಲ್ಲಿ ತೀವ್ರ ಸ್ಪರ್ಧೆ ಒಡ್ಡಿ ರನ್ನರ್‌ ಅಪ್‌ ಆದರು. ಅಂತಿಮವಾಗಿ ಸುದೀಪ್‌ ಅವರು ಶಶಿ ಅವರ ಕೈ ಎತ್ತುವ ಮೂಲಕ ಕೂತುಹಲಕ್ಕೆ ಅಂತ್ಯ ಹಾಡಿದರು.

ಸೀಸನ್ -6ರ 12ನೇ ಕಂಟೆಸ್ಟೆಂಟ್ ಆಗಿ ಶಶಿ ಬಿಗ್‍ಬಾಸ್ ಮನೆಯೊಳಗೆ ಎಂಟ್ರಿ ನೀಡಿದ್ದರು. ಮಾಡರ್ನ್ ರೈತ ಅಂತಾನೇ ಫೇಮಸ್ ಆಗಿದ್ದ ಇವರು, ಎಲ್ಲಾ ಟಾಸ್ಕ್‍ಗಳನ್ನ ಕೂಡ ಚೆನ್ನಾಗಿಯೇ ಮಾಡಿದ್ದರು. ಹೀಗಾಗಿ, ರೈತನೊಬ್ಬ ಮೊದಲ ಬಾರಿಗೆ ಬಿಗ್ ಬಾಸ್ ಗೆಲ್ತಾನೆ ಅನ್ನೋ ಮಾತು ಕೇಳಿ ಬಂದಿತ್ತು. ಅದರಂತೆ ಶಶಿಕುಮಾರ್ ಬಿಗ್‍ಬಾಸ್ ಸೀಜನ್ -6 ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.

ಚಿಕ್ಕಬಳ್ಳಾಪುರದ ಚಿಂತಾಮಣಿಯವರಾದ ಶಶಿ ಆಕರ್ಷಕ ರೂಪು ಹೊಂದಿರುವ ಇವರು ಮಾಡರ್ನ್ ರೈತ, ಕೃಷಿಯಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ. 50 ಲಕ್ಷ ರೂಪಾಯಿ ಬಹುಮಾನ ಮತ್ತು ಟ್ರೋಫಿಯನ್ನು ಶಶಿ ತನ್ನದಾಗಿಸಿಕೊಂಡಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago