ನವದೆಹಲಿ: ಭಾರತ-ಚೀನಾ ಮಧ್ಯೆ ಸೇನಾ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆಗಳು ವಿಫಲವಾದರೆ ಚೀನಾದ ಉಲ್ಲಂಘನೆ, ಅತಿಕ್ರಮಗಳನ್ನು ಎದುರಿಸಲು ಭಾರತದ ಮುಂದೆ ಮಿಲಿಟರಿ ಆಯ್ಕೆಗಳಿವೆ ಎಂದು ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವ ಲಡಾಕ್ ನಲ್ಲಿ ಚೀನಾ ಸೇನೆಯ ಕಡೆಯಿಂದ ಉಲ್ಲಂಘನೆ, ಸಂಘರ್ಷಗಳನ್ನು ಎದುರಿಸಲು ಬೇರೆಲ್ಲಾ ಆಯ್ಕೆಗಳು ವಿಫಲವಾದರೆ ಮಿಲಿಟರಿ ಆಯ್ಕೆಗಳು ನಮ್ಮ ಮುಂದಿವೆ. ಆದರೆ ಅದನ್ನು ಸೇನಾ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆ ವಿಫಲವಾದರೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹಾಗಾದರೆ ಮಿಲಿಟರಿ ಆಯ್ಕೆಗಳೇನು ಎಂಬುದಕ್ಕೆ ಜನರಲ್ ರಾವತ್ ವಿವರ ನೀಡಲು ನಿರಾಕರಿಸಿದ್ದಾರೆ.
ಚೀನಾ ಸೇನೆಯ ಅತಿಕ್ರಮ ಪ್ರವೇಶದ ಮೂಲಕ ಮೇ 5ರಂದು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಸೇನೆ ನಿಲುಗಡೆಯಿಂದ ಆರಂಭವಾದ ಭಾರತ-ಚೀನಾ ಸಂಘರ್ಷ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗುವುದರೊಂದಿಗೆ ತಾರಕಕ್ಕೇರಿ ಇನ್ನೂ ನಿಂತಿಲ್ಲ.
ಗಡಿ ವಾಸ್ತವ ರೇಖೆಯ ಫಿಂಗರ್ ಪ್ರದೇಶ, ಗಲ್ವಾನ್ ಕಣಿವೆ, ಹಾಟ್ ಸ್ಟ್ರಿಂಗ್ ಮತ್ತು ಕೊಂಗ್ರುಂಗ್ ನಾಲಾ ಪ್ರದೇಶಗಳಲ್ಲಿ ಇನ್ನೂ ಸೇನಾಪಡೆಗಳಿವೆ.
ಕಳೆದ 3 ತಿಂಗಳಿನಿಂದ ಎರಡೂ ದೇಶಗಳ ಮಧ್ಯೆ ಹಲವು ಸುತ್ತಿನ ಸೇನಾ ಮತ್ತು ರಾಜತಾಂತ್ರಿಕ ಸುತ್ತಿನ ಮಾತುಕತೆ ನಡೆಯುತ್ತಲೇ ಇದೆ. ಐದು ಲೆಫ್ಟಿನೆಂಟ್ ಜನರಲ್ ಮಟ್ಟದ ಮಾತುಕತೆಗಳು ನಡೆದು ಅವುಗಳಿಂದಲೂ ಪ್ರಯೋಜನವಾಗಿಲ್ಲ. ಚೀನಾ ಸಂಪೂರ್ಣವಾಗಿ ತನ್ನ ಸೇನೆಯನ್ನು ಹಿಂತೆಗೆದುಕೊಂಡಿಲ್ಲ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…