ನವದೆಹಲಿ: ಭಾರತ-ಚೀನಾ ಮಧ್ಯೆ ಸೇನಾ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆಗಳು ವಿಫಲವಾದರೆ ಚೀನಾದ ಉಲ್ಲಂಘನೆ, ಅತಿಕ್ರಮಗಳನ್ನು ಎದುರಿಸಲು ಭಾರತದ ಮುಂದೆ ಮಿಲಿಟರಿ ಆಯ್ಕೆಗಳಿವೆ ಎಂದು ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವ ಲಡಾಕ್ ನಲ್ಲಿ ಚೀನಾ ಸೇನೆಯ ಕಡೆಯಿಂದ ಉಲ್ಲಂಘನೆ, ಸಂಘರ್ಷಗಳನ್ನು ಎದುರಿಸಲು ಬೇರೆಲ್ಲಾ ಆಯ್ಕೆಗಳು ವಿಫಲವಾದರೆ ಮಿಲಿಟರಿ ಆಯ್ಕೆಗಳು ನಮ್ಮ ಮುಂದಿವೆ. ಆದರೆ ಅದನ್ನು ಸೇನಾ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆ ವಿಫಲವಾದರೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹಾಗಾದರೆ ಮಿಲಿಟರಿ ಆಯ್ಕೆಗಳೇನು ಎಂಬುದಕ್ಕೆ ಜನರಲ್ ರಾವತ್ ವಿವರ ನೀಡಲು ನಿರಾಕರಿಸಿದ್ದಾರೆ.
ಚೀನಾ ಸೇನೆಯ ಅತಿಕ್ರಮ ಪ್ರವೇಶದ ಮೂಲಕ ಮೇ 5ರಂದು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಸೇನೆ ನಿಲುಗಡೆಯಿಂದ ಆರಂಭವಾದ ಭಾರತ-ಚೀನಾ ಸಂಘರ್ಷ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗುವುದರೊಂದಿಗೆ ತಾರಕಕ್ಕೇರಿ ಇನ್ನೂ ನಿಂತಿಲ್ಲ.
ಗಡಿ ವಾಸ್ತವ ರೇಖೆಯ ಫಿಂಗರ್ ಪ್ರದೇಶ, ಗಲ್ವಾನ್ ಕಣಿವೆ, ಹಾಟ್ ಸ್ಟ್ರಿಂಗ್ ಮತ್ತು ಕೊಂಗ್ರುಂಗ್ ನಾಲಾ ಪ್ರದೇಶಗಳಲ್ಲಿ ಇನ್ನೂ ಸೇನಾಪಡೆಗಳಿವೆ.
ಕಳೆದ 3 ತಿಂಗಳಿನಿಂದ ಎರಡೂ ದೇಶಗಳ ಮಧ್ಯೆ ಹಲವು ಸುತ್ತಿನ ಸೇನಾ ಮತ್ತು ರಾಜತಾಂತ್ರಿಕ ಸುತ್ತಿನ ಮಾತುಕತೆ ನಡೆಯುತ್ತಲೇ ಇದೆ. ಐದು ಲೆಫ್ಟಿನೆಂಟ್ ಜನರಲ್ ಮಟ್ಟದ ಮಾತುಕತೆಗಳು ನಡೆದು ಅವುಗಳಿಂದಲೂ ಪ್ರಯೋಜನವಾಗಿಲ್ಲ. ಚೀನಾ ಸಂಪೂರ್ಣವಾಗಿ ತನ್ನ ಸೇನೆಯನ್ನು ಹಿಂತೆಗೆದುಕೊಂಡಿಲ್ಲ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…