ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ವರಿಸಿದ ಪದವೀಧರ ಯುವತಿ – Vishwanews24
ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ವರಿಸಿದ ಪದವೀಧರ ಯುವತಿ – Vishwanews24
ನರಗುಂದ : ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿ ವರಿಸಿದ್ದಾರೆ.
ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಭಾನುವಾರ ನವಜೀವನಕ್ಕೆ ಕಾಲಿಟ್ಟರು. ಸೋಮವಾರ ಪಟ್ಟಣದಲ್ಲಿ ವಲೀಮಾ ನಡೆಯಿತು.

ನರಗುಂದದ ನಿವಾಸಿ ವರ ಮಹಮ್ಮದ್ ಸಾಧಿಕ್ ನರೇಗಲ್ನ ಶ್ರೀಅನ್ನದಾನೇಶ್ವರ ಕಿವುಡ ಮತ್ತು ಮೂಕರ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಪೊರೈಸಿದ್ದಾರೆ. ನಂತರ ಮೈಸೂರಿನ ಜೆಎಸ್ಎಸ್ ಕಾಲೇಜ್ನಲ್ಲಿ ಪಿಯುಸಿ ಓದಿ, ಆಟೋ ಇಲೆಕ್ಟ್ರೀಷಿಯನ್ ಆಗಿ ಸ್ವಂತ ಉದ್ಯೋಗದಲ್ಲಿದ್ದಾರೆ. ವರನಿಗೆ ದೂರದ ಸಂಬಂಧಿ ಆಗಿರುವ ವಧು ಸುಮಯ್ಯಾ ನರಗುಂದದ ಶಾರದಾಂಬಾ ಶಾಲೆಯಲ್ಲಿ 1 ರಿಂದ 10ನೇ ತರಗತಿ ಓದಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ವರ್ಷ ಕಲಾ ಶಿಕ್ಷಣ ಪಡೆದಿದ್ದಾರೆ. ಬಳಿಕ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.
‘ದೇವರ ಸದಿಚ್ಛೆಯಂತೆ ನಮ್ಮ ಮಗಳಿಗೆ ವರ ಸಿಕ್ಕಿದ್ದಾನೆ. ಗುರು, ಹಿರಿಯರ ಆಶೀರ್ವಾದದಿಂದ ಸಮಾಜಕ್ಕೆ ಮಾದರಿಯಾಗುವಂತೆ ಇವರಿಬ್ಬರೂ ಸುಂದರವಾದ ಜೀವನವನ್ನು ನಡೆಸಲಿ’ ಎಂದು ವಧುವಿನ ತಂದೆ ಮಲೀಕಸಾಬ್ ಪಲ್ಲೇದ ಹಾರೈಸಿದರು.
ಕಾಪು ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಉನ್ನತ ಮಟ್ಟದ ತನಿಖೆಗೆ ವಿಹಿಂಪ ಆಗ್ರಹ – Vishwanews24
