ನರಗುಂದ : ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿ ವರಿಸಿದ್ದಾರೆ.
ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಭಾನುವಾರ ನವಜೀವನಕ್ಕೆ ಕಾಲಿಟ್ಟರು. ಸೋಮವಾರ ಪಟ್ಟಣದಲ್ಲಿ ವಲೀಮಾ ನಡೆಯಿತು.
ನರಗುಂದದ ನಿವಾಸಿ ವರ ಮಹಮ್ಮದ್ ಸಾಧಿಕ್ ನರೇಗಲ್ನ ಶ್ರೀಅನ್ನದಾನೇಶ್ವರ ಕಿವುಡ ಮತ್ತು ಮೂಕರ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಪೊರೈಸಿದ್ದಾರೆ. ನಂತರ ಮೈಸೂರಿನ ಜೆಎಸ್ಎಸ್ ಕಾಲೇಜ್ನಲ್ಲಿ ಪಿಯುಸಿ ಓದಿ, ಆಟೋ ಇಲೆಕ್ಟ್ರೀಷಿಯನ್ ಆಗಿ ಸ್ವಂತ ಉದ್ಯೋಗದಲ್ಲಿದ್ದಾರೆ. ವರನಿಗೆ ದೂರದ ಸಂಬಂಧಿ ಆಗಿರುವ ವಧು ಸುಮಯ್ಯಾ ನರಗುಂದದ ಶಾರದಾಂಬಾ ಶಾಲೆಯಲ್ಲಿ 1 ರಿಂದ 10ನೇ ತರಗತಿ ಓದಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ವರ್ಷ ಕಲಾ ಶಿಕ್ಷಣ ಪಡೆದಿದ್ದಾರೆ. ಬಳಿಕ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.
‘ದೇವರ ಸದಿಚ್ಛೆಯಂತೆ ನಮ್ಮ ಮಗಳಿಗೆ ವರ ಸಿಕ್ಕಿದ್ದಾನೆ. ಗುರು, ಹಿರಿಯರ ಆಶೀರ್ವಾದದಿಂದ ಸಮಾಜಕ್ಕೆ ಮಾದರಿಯಾಗುವಂತೆ ಇವರಿಬ್ಬರೂ ಸುಂದರವಾದ ಜೀವನವನ್ನು ನಡೆಸಲಿ’ ಎಂದು ವಧುವಿನ ತಂದೆ ಮಲೀಕಸಾಬ್ ಪಲ್ಲೇದ ಹಾರೈಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…