ನರಗುಂದ : ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿ ವರಿಸಿದ್ದಾರೆ.
ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಭಾನುವಾರ ನವಜೀವನಕ್ಕೆ ಕಾಲಿಟ್ಟರು. ಸೋಮವಾರ ಪಟ್ಟಣದಲ್ಲಿ ವಲೀಮಾ ನಡೆಯಿತು.
ನರಗುಂದದ ನಿವಾಸಿ ವರ ಮಹಮ್ಮದ್ ಸಾಧಿಕ್ ನರೇಗಲ್ನ ಶ್ರೀಅನ್ನದಾನೇಶ್ವರ ಕಿವುಡ ಮತ್ತು ಮೂಕರ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಪೊರೈಸಿದ್ದಾರೆ. ನಂತರ ಮೈಸೂರಿನ ಜೆಎಸ್ಎಸ್ ಕಾಲೇಜ್ನಲ್ಲಿ ಪಿಯುಸಿ ಓದಿ, ಆಟೋ ಇಲೆಕ್ಟ್ರೀಷಿಯನ್ ಆಗಿ ಸ್ವಂತ ಉದ್ಯೋಗದಲ್ಲಿದ್ದಾರೆ. ವರನಿಗೆ ದೂರದ ಸಂಬಂಧಿ ಆಗಿರುವ ವಧು ಸುಮಯ್ಯಾ ನರಗುಂದದ ಶಾರದಾಂಬಾ ಶಾಲೆಯಲ್ಲಿ 1 ರಿಂದ 10ನೇ ತರಗತಿ ಓದಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ವರ್ಷ ಕಲಾ ಶಿಕ್ಷಣ ಪಡೆದಿದ್ದಾರೆ. ಬಳಿಕ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.
‘ದೇವರ ಸದಿಚ್ಛೆಯಂತೆ ನಮ್ಮ ಮಗಳಿಗೆ ವರ ಸಿಕ್ಕಿದ್ದಾನೆ. ಗುರು, ಹಿರಿಯರ ಆಶೀರ್ವಾದದಿಂದ ಸಮಾಜಕ್ಕೆ ಮಾದರಿಯಾಗುವಂತೆ ಇವರಿಬ್ಬರೂ ಸುಂದರವಾದ ಜೀವನವನ್ನು ನಡೆಸಲಿ’ ಎಂದು ವಧುವಿನ ತಂದೆ ಮಲೀಕಸಾಬ್ ಪಲ್ಲೇದ ಹಾರೈಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…