ಬೆಂಗಳೂರು: ತನ್ನ ವಿರುದ್ಧ ಜನಪದ ಹಾಡು ತಿರುಚಿದ ಆರೋಪ ಕೇಳಿ ಬರುತ್ತಿದ್ದಂತೆಯೇ ಕನ್ನಡ ರ್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನೋ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
Ramping ಹಾಡುಗಳ ಮೂಲಕ ಪ್ರಸಿದ್ಧಿಯಾಗಿರುವಂತ ಚೆಂದನ್ ಶೆಟ್ಟಿ ಇತ್ತೀಚೆಗೆ ಕೋಲುಮಂಡೆ ಎನ್ನುವಂತ ವೀಡಿಯೋ ಆಲ್ಬಂ ಹೊರ ತಂದಿದ್ದರು. ಈ ವೀಡಿಯೋ ಆಲ್ಪಂ ನಲ್ಲಿ ಶರಣೆ ಸಂಕಮ್ಮ, ಮಾದಪ್ಪನ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆಯಂತೆ. ಸಂಕಮ್ಮ, ಮಾದಪ್ಪನನ್ನು ಕೆಟ್ಟದಾಗಿ ಚಿತ್ರೀಕರಣ ಮಾಡಿರುವುದೇ ಮಲೆ ಮಹದೇಶ್ವರ ಭಕ್ತರ ಆಕ್ರೋಶಕ್ಕೆ ಕಾರಣವಾಗಿರೋದು.
ಮಲೆ ಮಹದೇಶ್ವರನ ಭಕ್ತರು ಈ ಸಂಬಂಧ ಕಿಡಿಕಾರಿದ್ದು, ಸಂಕಮ್ಮ, ಮಾದಪ್ಪನನ್ನ ಕೆಟ್ಟದಾಗಿ ಚಿತ್ರೀಕರಣ ಮಾಡಲಾಗಿದೆ. ಜಾನಪದ ಹಾಡಿಗೆ Ramp ಸಾಂಗ್ ಟಚ್ ಕೊಡಲಾಗಿದೆ. ಸಂಕಮ್ಮನನ್ನು ಕೆಟ್ಟದಾಗಿ ತೋರಿಸಿದ್ದಾರೆ. ಚೆಂದನ್ ಶೆಟ್ಟಿ ತಂಡ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಈ ಮೂಲಕ ಇದೀಗ ಚೆಂದನ್ ಶೆಟ್ಟಿ ಮತ್ತೆ ವಿವಾದಕ್ಕೆ ಗುರಿಯಾಗಿದ್ದರು.
ಇಂತಹ ವೀಡಿಯೋ ಆಲ್ಪಂ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವಂತ ಚೆಂದನ್ ಶೆಟ್ಟಿಯವರು ಕೆಟ್ಟದಾಗಿ ಚಿತ್ರೀಕರಿಸಿರುವಂತೆ ಶರಣೆ ಸಂಕಮ್ಮನ ವೀಡಿಯೋ ದೃಶ್ಯಾವಳಿಯನ್ನು ತೆಗೆದು ಹಾಕುತ್ತೇವೆ. ನಾನು ಚಾಮರಾಜನಗರ, ಮೈಸೂರು ಸೇರಿದಂತೆ ಸಂಕಮ್ಮ, ಮಲೆಮಹದೇಶ್ವರ ಭಕ್ತರನ್ನು ಕ್ಷಮೆ ಯಾಚಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…