ಬೆಂಗಳೂರು: ತನ್ನ ವಿರುದ್ಧ ಜನಪದ ಹಾಡು ತಿರುಚಿದ ಆರೋಪ ಕೇಳಿ ಬರುತ್ತಿದ್ದಂತೆಯೇ ಕನ್ನಡ ರ್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನೋ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
Ramping ಹಾಡುಗಳ ಮೂಲಕ ಪ್ರಸಿದ್ಧಿಯಾಗಿರುವಂತ ಚೆಂದನ್ ಶೆಟ್ಟಿ ಇತ್ತೀಚೆಗೆ ಕೋಲುಮಂಡೆ ಎನ್ನುವಂತ ವೀಡಿಯೋ ಆಲ್ಬಂ ಹೊರ ತಂದಿದ್ದರು. ಈ ವೀಡಿಯೋ ಆಲ್ಪಂ ನಲ್ಲಿ ಶರಣೆ ಸಂಕಮ್ಮ, ಮಾದಪ್ಪನ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆಯಂತೆ. ಸಂಕಮ್ಮ, ಮಾದಪ್ಪನನ್ನು ಕೆಟ್ಟದಾಗಿ ಚಿತ್ರೀಕರಣ ಮಾಡಿರುವುದೇ ಮಲೆ ಮಹದೇಶ್ವರ ಭಕ್ತರ ಆಕ್ರೋಶಕ್ಕೆ ಕಾರಣವಾಗಿರೋದು.
ಮಲೆ ಮಹದೇಶ್ವರನ ಭಕ್ತರು ಈ ಸಂಬಂಧ ಕಿಡಿಕಾರಿದ್ದು, ಸಂಕಮ್ಮ, ಮಾದಪ್ಪನನ್ನ ಕೆಟ್ಟದಾಗಿ ಚಿತ್ರೀಕರಣ ಮಾಡಲಾಗಿದೆ. ಜಾನಪದ ಹಾಡಿಗೆ Ramp ಸಾಂಗ್ ಟಚ್ ಕೊಡಲಾಗಿದೆ. ಸಂಕಮ್ಮನನ್ನು ಕೆಟ್ಟದಾಗಿ ತೋರಿಸಿದ್ದಾರೆ. ಚೆಂದನ್ ಶೆಟ್ಟಿ ತಂಡ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಈ ಮೂಲಕ ಇದೀಗ ಚೆಂದನ್ ಶೆಟ್ಟಿ ಮತ್ತೆ ವಿವಾದಕ್ಕೆ ಗುರಿಯಾಗಿದ್ದರು.
ಇಂತಹ ವೀಡಿಯೋ ಆಲ್ಪಂ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವಂತ ಚೆಂದನ್ ಶೆಟ್ಟಿಯವರು ಕೆಟ್ಟದಾಗಿ ಚಿತ್ರೀಕರಿಸಿರುವಂತೆ ಶರಣೆ ಸಂಕಮ್ಮನ ವೀಡಿಯೋ ದೃಶ್ಯಾವಳಿಯನ್ನು ತೆಗೆದು ಹಾಕುತ್ತೇವೆ. ನಾನು ಚಾಮರಾಜನಗರ, ಮೈಸೂರು ಸೇರಿದಂತೆ ಸಂಕಮ್ಮ, ಮಲೆಮಹದೇಶ್ವರ ಭಕ್ತರನ್ನು ಕ್ಷಮೆ ಯಾಚಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…