ಕೋಲಾರ: ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ.
ರಶ್ಮಿ(25) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಶ್ಮಿ, ಪತಿ ಮನೆಯಲ್ಲೇ ಡೆತ್ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 1 ವರ್ಷದ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.
ರಶ್ಮಿ ಡೆತ್ನೋಟ್ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈʼ ಎಂದು ಬರೆದಿದ್ದಾರೆ.
ಇತ್ತ ತಂದೆ ತಾಯಿಗೂ ಸಾರಿ ಕೇಳಿರುವ ರಶ್ಮಿ, ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿಯವರು ಒಳ್ಳೆಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಬರೆದು ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ 3 ತಿಂಗಳ ಹಿಂದೆ ರಶ್ಮಿಗೆ ಗರ್ಭಪಾತವಾಗಿದ್ದು, ವರದಕ್ಷಿಣೆ ನೀಡಿಲ್ಲ. ಮಗು ಆಗಿಲ್ಲ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.
ಪ್ರಕರಣದ ಆರೋಪಿಗಳಾದ ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ, ದೊಡ್ಡತ್ತೆ ರತ್ನಮ್ಮರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…