ಹಾಸನ:ಚನ್ನರಾಯಪಟ್ಟಣ ತಾಲ್ಲೂಕು ಯಲಿಯೂರಿನ ದೇವೀರಮ್ಮ ಹಾಗೂ ಬೇಲೂರಿನ ಚನ್ನಕೇಶವ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಗೌಡರು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲರೂ ಸೇರಿ ಪ್ರಜ್ವಲ್ ನನ್ನು ಗೆಲ್ಲಿಸಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮನವಿ ಮಾಡಿದರು.
‘ದೇಶದಲ್ಲಿ ಮೋದಿ ಬಿಟ್ಟರೆ ಬೇರೆ ಯಾರೊಬ್ಬರೂ ಪ್ರಧಾನಿ ಆಗೋರು ಇಲ್ಲವೇ ಎಂದು ಪ್ರಶ್ನಿಸಿದ ಗೌಡರು, ಬೆಂಗಳೂರಿನಲ್ಲಿ ಬಿಜೆಪಿ ಮೂರು ಸ್ಥಾನ ಗೆಲ್ಲಲು ಬಿಡುವುದಿಲ್ಲ’ ಎಂದು ಶಪಥ ಮಾಡಿದರು.
‘ನಾನು-ಸಿದ್ದರಾಮಯ್ಯ ಸೇರಿ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಬಿಜೆಪಿ ಬಲ ಕುಗ್ಗಿಸಲು ಹೋರಾಟ ಮಾಡುವುದಾಗಿ’ ಎಚ್ಚರಿಕೆ ನೀಡಿದರು.
ಹೋದ ಕಡೆ, ಬಂದ ಕಡೆಯೆಲ್ಲಾ ಕಾಂಗ್ರೆಸ್ ಪಕ್ಷ ತೊಲಗಿಸುವ ಮಾತುಗಳನ್ನಾಡುತ್ತಿದ್ದಾರೆ’ ಎಂದು ಗುಡುಗಿದರು.ಮಾಧ್ಯಮಗಳೂ ಕೂಡ, ಮೋದಿ ಬಿಟ್ಟರೆ ಬೇರೆ ಯಾರೂ ದೇಶ ಆಳರು ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.
ಮಾಯವತಿಗೆ, ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ ಹಾಗೂ ರಾಹುಲ್ ಗಾಂಧಿಗೆ ಈ ದೇಶ ಆಳುವ ಸಾಮರ್ಥ್ಯ ಇಲ್ಲವೇ ಎಂದು ಪ್ರಶ್ನಿಸಿದರು.
‘ನಾನೇ ಎಲ್ಲಾ ಎನ್ನುತ್ತಿದ್ದ ಮೋದಿ ಅವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯಗಳು ಕೈ ತಪ್ಪಿದ ನಂತರ ಐಟಿ, ಇಡಿ ದಾಳಿ ಮೂಲಕ ಸಣ್ಣ ಸಣ್ಣ ಪಕ್ಷಗಳನ್ನು ಮುಗಿಸಲು ಹೊರಟಿದ್ದಾರೆ’ ಎಂದು ಮೋದಿ ಕಾರ್ಯವೈಖರಿ ಯನ್ನು ಟೀಕಿಸಿದರು.
‘ಮತ್ತೊಮ್ಮೆ ಪ್ರಧಾನಿಯಾಗೋದು ಸೇರಿದಂತೆ ನನಗೆ ಯಾವುದೇ ಅಧಿಕಾರ ವ್ಯಾಮೋಹ ಇಲ್ಲ. ನಾನು, ಸಿದ್ದರಾಮಯ್ಯ ಒಟ್ಟಾಗಿ ಸೇರಿ ಮಂಡ್ಯ, ಮೈಸೂರು ಸೇರಿ ಎಲ್ಲೆಡೆ ಪ್ರಚಾರ ಮಾಡುತ್ತೇವೆ. ಬಿಜೆಪಿಯನ್ನು ಸಂಪೂರ್ಣ ತೆಗೆಯುತ್ತೇವೆ ಎಂದು ಹೇಳಲ್ಲ. ಆದರೆ, ಇರುವ ಸ್ಥಾನ ಖಂಡಿತಾ ಕಡಿಮೆ ಮಾಡುತ್ತೇವೆ’ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…