ಹಾಸನ:ಚನ್ನರಾಯಪಟ್ಟಣ ತಾಲ್ಲೂಕು ಯಲಿಯೂರಿನ ದೇವೀರಮ್ಮ ಹಾಗೂ ಬೇಲೂರಿನ ಚನ್ನಕೇಶವ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಗೌಡರು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲರೂ ಸೇರಿ ಪ್ರಜ್ವಲ್ ನನ್ನು ಗೆಲ್ಲಿಸಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮನವಿ ಮಾಡಿದರು.
‘ದೇಶದಲ್ಲಿ ಮೋದಿ ಬಿಟ್ಟರೆ ಬೇರೆ ಯಾರೊಬ್ಬರೂ ಪ್ರಧಾನಿ ಆಗೋರು ಇಲ್ಲವೇ ಎಂದು ಪ್ರಶ್ನಿಸಿದ ಗೌಡರು, ಬೆಂಗಳೂರಿನಲ್ಲಿ ಬಿಜೆಪಿ ಮೂರು ಸ್ಥಾನ ಗೆಲ್ಲಲು ಬಿಡುವುದಿಲ್ಲ’ ಎಂದು ಶಪಥ ಮಾಡಿದರು.
‘ನಾನು-ಸಿದ್ದರಾಮಯ್ಯ ಸೇರಿ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಬಿಜೆಪಿ ಬಲ ಕುಗ್ಗಿಸಲು ಹೋರಾಟ ಮಾಡುವುದಾಗಿ’ ಎಚ್ಚರಿಕೆ ನೀಡಿದರು.
ಹೋದ ಕಡೆ, ಬಂದ ಕಡೆಯೆಲ್ಲಾ ಕಾಂಗ್ರೆಸ್ ಪಕ್ಷ ತೊಲಗಿಸುವ ಮಾತುಗಳನ್ನಾಡುತ್ತಿದ್ದಾರೆ’ ಎಂದು ಗುಡುಗಿದರು.ಮಾಧ್ಯಮಗಳೂ ಕೂಡ, ಮೋದಿ ಬಿಟ್ಟರೆ ಬೇರೆ ಯಾರೂ ದೇಶ ಆಳರು ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.
ಮಾಯವತಿಗೆ, ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ ಹಾಗೂ ರಾಹುಲ್ ಗಾಂಧಿಗೆ ಈ ದೇಶ ಆಳುವ ಸಾಮರ್ಥ್ಯ ಇಲ್ಲವೇ ಎಂದು ಪ್ರಶ್ನಿಸಿದರು.
‘ನಾನೇ ಎಲ್ಲಾ ಎನ್ನುತ್ತಿದ್ದ ಮೋದಿ ಅವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯಗಳು ಕೈ ತಪ್ಪಿದ ನಂತರ ಐಟಿ, ಇಡಿ ದಾಳಿ ಮೂಲಕ ಸಣ್ಣ ಸಣ್ಣ ಪಕ್ಷಗಳನ್ನು ಮುಗಿಸಲು ಹೊರಟಿದ್ದಾರೆ’ ಎಂದು ಮೋದಿ ಕಾರ್ಯವೈಖರಿ ಯನ್ನು ಟೀಕಿಸಿದರು.
‘ಮತ್ತೊಮ್ಮೆ ಪ್ರಧಾನಿಯಾಗೋದು ಸೇರಿದಂತೆ ನನಗೆ ಯಾವುದೇ ಅಧಿಕಾರ ವ್ಯಾಮೋಹ ಇಲ್ಲ. ನಾನು, ಸಿದ್ದರಾಮಯ್ಯ ಒಟ್ಟಾಗಿ ಸೇರಿ ಮಂಡ್ಯ, ಮೈಸೂರು ಸೇರಿ ಎಲ್ಲೆಡೆ ಪ್ರಚಾರ ಮಾಡುತ್ತೇವೆ. ಬಿಜೆಪಿಯನ್ನು ಸಂಪೂರ್ಣ ತೆಗೆಯುತ್ತೇವೆ ಎಂದು ಹೇಳಲ್ಲ. ಆದರೆ, ಇರುವ ಸ್ಥಾನ ಖಂಡಿತಾ ಕಡಿಮೆ ಮಾಡುತ್ತೇವೆ’ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…