ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಜ.15 ರಿಂದ ಜ.17 ರ ವರೆಗೆ ಮಕರ ಸಂಕ್ರಮಣ ಉತ್ಸವ -Vishwanews24

ಮಾರಣಕಟ್ಟೆ,:ಉಡುಪಿ,ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಆರಾಧ್ಯ ದೇವವಾಗಿರುವ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಜ.15 ರಿಂದ ಜ.17 ರ ತನಕ ಮಕರಸಂಕ್ರಮಣ ಉತ್ಸವ ಜರಗಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರು ಕಟ್ಟುನಿಟ್ಟಾಗಿ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದೆ ಬಟ್ಟೆ ಅಥವಾ ಕಾಗದದ ಚೀಲ ಬಳಸುವಂತೆ ಸೂಚಿಸಲಾಗಿದ್ದು ಪ್ಲಾಸ್ಟಿಕ್‌ ಮುಕ್ತ ಮಕರಸಂಕ್ರಮಣ ಉತ್ಸವ ನಡೆಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ ಎಂದು ದೇಗುಲದ ಆಡಳಿತ
ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಹಾಗೂ ಮಂಡಳಿಯ ಪ್ರಮುಖ ಸಿ.ರಘುರಾಮ ಶೆಟ್ಟಿ ತಿಳಿಸಿದ್ದಾರೆ.

ಹಲವಾರು ವರ್ಷಗಳ ಅನಂತರ ಈ ಬಾರಿ ಜ. 14ರ ಬದಲು ಜ.15ರಂದು ಸಂಕ್ರಮಣ ಉತ್ಸವ ಆರಂಭಗೊಳಲಿದ್ದು ಅದಕ್ಕಾಗಿ ದೇಗುಲ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳ ಸಹಿತ ರಥಬೀದಿಯನ್ನು ಸುಂದರವಾಗಿ ಅಲಂಕರಿಸಲಾಗುತ್ತಿದೆ. ಮಕರ ಸಂಕ್ರಮಣ ಸಂದರ್ಭ ನಡೆಯುವ ಸೇವಂತಿಗೆ ಹೂವಿನ ಹೊರೆ ಕಾಣಿಕೆ ಮಹತ್ವದ್ದಾಗಿದ್ದು ಇದಕ್ಕಾಗಿ ಸರತಿಯ ಸಾಲಿನಲ್ಲಿ ಸಾಗಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ .

ಕ್ಷೇತ್ರದ ವಿಶೇಷ ಉತ್ಸವಗಳು
ಮಾರಣಕಟ್ಟೆ ಮಕರ ಸಂಕ್ರಾಂತಿಯು ಬಹುದೊಡ್ಡ ಜಾತ್ರೆ. ಮೂರು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ತುಳುನಾಡಿನಿಂದ ಅಸಂಖ್ಯಾಕ ಭಕ್ತರು ಆಗಮಿಸುತ್ತಾರೆ. ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸಿಂಗಾರ ಹೂವಿನ ಅರ್ಪಣೆ ವಿಶೇಷವಾಗಿದೆ. ಕುಂಭ ಸಂಕ್ರಮಣ ಇಲ್ಲಿನ ಇನ್ನೊಂದು ವಿಶೇಷ ಜಾತ್ರೆ. ಅದಲ್ಲದೆ ವರ್ಷದ ಮೂರು ಕಾಲದಲ್ಲಿ ಚೆರುವಿನ ಪೂಜೆ, ಸಂಪ್ರೋಕ್ಷಣೆ, ಸೌರಮಾನ ಯುಗಾದಿ, ಸೋಣೆ ಆರತಿ, ಕದಿರು ಕಟ್ಟುವುದು, ದೀಪೋತ್ಸವ ಇವು ಇಲ್ಲಿನ ಇನ್ನಿತರ ವಿಶೇಷ ಪೂಜೆಗಳು.

ಸಂಕ್ರಾಂತಿ ಪೂಜಾ ವಿಶೇಷತೆ
ಜ.15 ರಂದು ಮಧ್ಯಾಹ್ನ12 ಗಂಟೆಗೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಹಾಮಂಗಳಾರತಿ ಹಾಗೂ ರಾತ್ರಿ 10. 30ಕ್ಕೆ ಗೆಂಡ ಸೇವೆ . ಜ.16 ರಂದು ಬೆಳಗ್ಗೆ 9.30ಕ್ಕೆ ಮಹಾ ಮಂಗಳಾರತಿ , ಅನಂತರ ಮಂಡಲ ಸೇವೆ. ಜ.17ರಂದು ಬೆಳಗ್ಗೆ 9.30 ಕ್ಕೆ ಮಹಾಮಂಗಳಾರತಿ , ಅನಂತರ ಮಂಡಲ ಸೇವೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago