ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಜ.15 ರಿಂದ ಜ.17 ರ ವರೆಗೆ ಮಕರ ಸಂಕ್ರಮಣ ಉತ್ಸವ -Vishwanews24

ಮಾರಣಕಟ್ಟೆ,:ಉಡುಪಿ,ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಆರಾಧ್ಯ ದೇವವಾಗಿರುವ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಜ.15 ರಿಂದ ಜ.17 ರ ತನಕ ಮಕರಸಂಕ್ರಮಣ ಉತ್ಸವ ಜರಗಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರು ಕಟ್ಟುನಿಟ್ಟಾಗಿ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದೆ ಬಟ್ಟೆ ಅಥವಾ ಕಾಗದದ ಚೀಲ ಬಳಸುವಂತೆ ಸೂಚಿಸಲಾಗಿದ್ದು ಪ್ಲಾಸ್ಟಿಕ್‌ ಮುಕ್ತ ಮಕರಸಂಕ್ರಮಣ ಉತ್ಸವ ನಡೆಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ ಎಂದು ದೇಗುಲದ ಆಡಳಿತ
ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಹಾಗೂ ಮಂಡಳಿಯ ಪ್ರಮುಖ ಸಿ.ರಘುರಾಮ ಶೆಟ್ಟಿ ತಿಳಿಸಿದ್ದಾರೆ.

ಹಲವಾರು ವರ್ಷಗಳ ಅನಂತರ ಈ ಬಾರಿ ಜ. 14ರ ಬದಲು ಜ.15ರಂದು ಸಂಕ್ರಮಣ ಉತ್ಸವ ಆರಂಭಗೊಳಲಿದ್ದು ಅದಕ್ಕಾಗಿ ದೇಗುಲ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳ ಸಹಿತ ರಥಬೀದಿಯನ್ನು ಸುಂದರವಾಗಿ ಅಲಂಕರಿಸಲಾಗುತ್ತಿದೆ. ಮಕರ ಸಂಕ್ರಮಣ ಸಂದರ್ಭ ನಡೆಯುವ ಸೇವಂತಿಗೆ ಹೂವಿನ ಹೊರೆ ಕಾಣಿಕೆ ಮಹತ್ವದ್ದಾಗಿದ್ದು ಇದಕ್ಕಾಗಿ ಸರತಿಯ ಸಾಲಿನಲ್ಲಿ ಸಾಗಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ .

ಕ್ಷೇತ್ರದ ವಿಶೇಷ ಉತ್ಸವಗಳು
ಮಾರಣಕಟ್ಟೆ ಮಕರ ಸಂಕ್ರಾಂತಿಯು ಬಹುದೊಡ್ಡ ಜಾತ್ರೆ. ಮೂರು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ತುಳುನಾಡಿನಿಂದ ಅಸಂಖ್ಯಾಕ ಭಕ್ತರು ಆಗಮಿಸುತ್ತಾರೆ. ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸಿಂಗಾರ ಹೂವಿನ ಅರ್ಪಣೆ ವಿಶೇಷವಾಗಿದೆ. ಕುಂಭ ಸಂಕ್ರಮಣ ಇಲ್ಲಿನ ಇನ್ನೊಂದು ವಿಶೇಷ ಜಾತ್ರೆ. ಅದಲ್ಲದೆ ವರ್ಷದ ಮೂರು ಕಾಲದಲ್ಲಿ ಚೆರುವಿನ ಪೂಜೆ, ಸಂಪ್ರೋಕ್ಷಣೆ, ಸೌರಮಾನ ಯುಗಾದಿ, ಸೋಣೆ ಆರತಿ, ಕದಿರು ಕಟ್ಟುವುದು, ದೀಪೋತ್ಸವ ಇವು ಇಲ್ಲಿನ ಇನ್ನಿತರ ವಿಶೇಷ ಪೂಜೆಗಳು.

ಸಂಕ್ರಾಂತಿ ಪೂಜಾ ವಿಶೇಷತೆ
ಜ.15 ರಂದು ಮಧ್ಯಾಹ್ನ12 ಗಂಟೆಗೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಹಾಮಂಗಳಾರತಿ ಹಾಗೂ ರಾತ್ರಿ 10. 30ಕ್ಕೆ ಗೆಂಡ ಸೇವೆ . ಜ.16 ರಂದು ಬೆಳಗ್ಗೆ 9.30ಕ್ಕೆ ಮಹಾ ಮಂಗಳಾರತಿ , ಅನಂತರ ಮಂಡಲ ಸೇವೆ. ಜ.17ರಂದು ಬೆಳಗ್ಗೆ 9.30 ಕ್ಕೆ ಮಹಾಮಂಗಳಾರತಿ , ಅನಂತರ ಮಂಡಲ ಸೇವೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

31 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

43 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago