ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.
ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್ನ ನಿರ್ದೇಶನ ಜಾರಿ ಮಾಡಿದಂತಾಗಿದೆ.
ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.
ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯಲಾಗುತ್ತದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…