Featured

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ರಾಜ್ಯ ಸರ್ಕಾರ ಮಹತ್ವದ ಆದೇಶ – vishwanews24

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶ

ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.

ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್​​ನ ನಿರ್ದೇಶನ ಜಾರಿ ಮಾಡಿದಂತಾಗಿದೆ.

ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್​​ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್​​ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್​​ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.

ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್​​ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯಲಾಗುತ್ತದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago