ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.
ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್ನ ನಿರ್ದೇಶನ ಜಾರಿ ಮಾಡಿದಂತಾಗಿದೆ.
ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.
ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯಲಾಗುತ್ತದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…