ಕಾಪು: ತುಳು ನಾಡಿನ ಸಪ್ತ ಜಾತ್ರೆಗಳಲ್ಲಿ ಒಂದೆಂಬ ಹೆಗ್ಗಳಿಕೆ ಗಳಿಸಿರುವ ಕಾಪುವಿನ ಪ್ರಸಿದ್ದ ಮೂರೂ ಮಾರಿಗುಡಿಗಳಲ್ಲಿ ವರ್ಷಂಪ್ರತಿ ನಡೆಯುವ ಸುಗ್ಗಿ ಮಾರಿ ಪೂಜೆ ಮಾ. 24 ಮತ್ತು ಮಾ.25ರಂದು ಏಕಕಾಲದಲ್ಲಿ ನಡೆಯಲಿದೆ. ಮಂಗಳವಾರ ರಾತ್ರಿ ಮಾರಿ ಪೂಜೆ, ಬುಧವಾರ ಮಧ್ಯಾಹ್ನ ದರ್ಶನ ಸೇವೆ ಬಳಿಕ ಮಾರಿ ವಿಸರ್ಜನೆ ಜರುಗಲಿದೆ.
ಮಾ. 17 ರಂದು ಬೇಟೆ (ಕುರಿ) ಬಿಡುವ ಮೂಲಕ ಮಾರಿ ಜಾತ್ರೆಯ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗುತ್ತವೆ. ಮಾ. 25 ರಂದು ಬುಧವಾರ ಸಂಜೆಯ ವರೆಗೂ ಮಾರಿ ಪೂಜಾ ಮಹೋತ್ಸವ ಮುಂದುವರಿಯುತ್ತದೆ. ಮಂಗಳವಾರ ರಾತ್ರಿ ಮಾರಿಯಮ್ಮ ದೇವಿಯ ಗದ್ದುಗೆ ಪ್ರತಿಷ್ಠಾಪನೆಯ ಬಳಿಕ ಸಾವಿರಾರು ಸಂಖ್ಯೆಯ ಕುರಿ-ಆಡು ಮತ್ತು ಕೋಳಿಗಳನ್ನು ಭಕ್ತರು ಮಾರಿಪೂಜೆಯ ಪ್ರಯುಕ್ತ ಸಮರ್ಪಿಸುತ್ತಾರೆ.
ಈ ಜಾತ್ರೆಗೆ ಅವಿಭಜಿತ ದಕ ಜಿಲ್ಲೆಗಳಲ್ಲದೆ ಘಟ್ಟ ಪ್ರದೇಶ ಹಾಗೂ ದೂರದ ಮಹಾರಾಷ್ಟ್ರದಿಂದ ಭಕ್ತಾದಿಗಳು ಬಂದು ಭಾಗವಹಿಸುತ್ತಾರೆ. ಭಕ್ತರು ದಾಖಲೆಯ ಸಂಖ್ಯೆಯಲ್ಲಿ ಹರಕೆ ರೂಪದಲ್ಲಿ ಹೂವಿನ ಪೂಜೆ, ಕುಂಕುಮಾರ್ಚನೆ, ಗದ್ದುಗೆ ಪೂಜೆ ಸಹಿತ ನಾನಾ ಸೇವೆಗಳನ್ನು ನಡೆಸುತ್ತಾರೆ.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…