Featured

ಮಾರ್ಚ್ 6ರಂದು ಮಂಗಳೂರು ಕಂಬಳೋತ್ಸವ -Vishwanews24

ಮಾರ್ಚ್ 6ರಂದು ಮಂಗಳೂರು ಕಂಬಳೋತ್ಸವ -Vishwanews24

ಮಂಗಳೂರು: ರಾಮ–ಲಕ್ಷ್ಮಣ ಜೋಡುಕರೆ ಕಂಬಳದ ನಾಲ್ಕನೇ ವರ್ಷದ ‘ಮಂಗಳೂರು ಕಂಬಳೋತ್ಸವ’ ಮಾರ್ಚ್ 6ರಂದು ಮಂಗಳೂರಿನ ಬಂಗ್ರ ಕೂಳೂರು ಬಳಿಯ ಗೋಲ್ಡ್‌ಪಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಕಂಬಳದ ಸಾರಥ್ಯ ವಹಿಸಿರುವ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಾರಿ ನಾಲ್ಕನೇ ವರ್ಷವಾಗಿದ್ದು, ಹಿರಿಯರು ಹಾಗೂ ಜಿಲ್ಲಾ ಕಂಬಳ ಸಮಿತಿ ಸಹಕಾರದಲ್ಲಿ ಯುವಜನತೆ ಸೇರಿಕೊಂಡು ಕಂಬಳೋತ್ಸವ ನಡೆಸುತ್ತಿದ್ದೇವೆ. ಪ್ರತಿವರ್ಷದಂತೆ ಆರು ವಿಭಾಗಗಳಲ್ಲಿ ಸುಮಾರು 120 ಜೋಡಿ ಕೋಣಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಂ.ಆರ್.ಜಿ. ಗ್ರೂಪ್‌ ಸಿಎಂಡಿ ಕೆ.ಪ್ರಕಾಶ್ ಶೆಟ್ಟಿ ಅವರ ಗೌರವಾಧ್ಯಕ್ಷತೆಯ ಸಮಿತಿ ಮೂಲಕ ಸಕಲ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ನೇರ ಪ್ರಸಾರ ಇರಲಿದೆ’ ಎಂದರು.

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ಮಾ.6ರಂದು ಬೆಳಿಗ್ಗೆ 8.30ಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್‌ ಕಾರ್ಣಿಕ್ ಚಾಲನೆ ನೀಡಲಿದ್ದಾರೆ. ಸಂಜೆ 6ಕ್ಕೆ ನಡೆಯುವ ಸಮಾರಂಭದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ, ಸಂಸದ ನಳಿನ್‌ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 7ರಂದು ಬೆಳಿಗ್ಗೆ 8ಕ್ಕೆ ಜಿಪಂ ಅಧ್ಯಕ್ಷ ಕಸ್ತೂರಿ ಪಂಜ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಲಿದೆ.

ಈ ಬಾರಿ ಕಂಬಳದಲ್ಲಿ ಚಿತ್ರಕಲೆ ಹಾಗೂ ಛಾಯಾಚಿತ್ರ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಮಾ.6ರಂದು ಬೆಳಿಗ್ಗೆ 10 ಗಂಟೆ ಮೊದಲು ನೋಂದಣಿ ಕಡ್ಡಾಯ. ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಬಹುಮಾನಗಳಿವೆ. ಕಂಬಳದಲ್ಲಿ ಮಹಿಳಾ ಜಾಕಿ ಪಾಲ್ಗೊಳ್ಳಲಿದ್ದಾರೆ ಎಂದರು.

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

58 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

1 hour ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

1 hour ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

2 hours ago