ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ – vishwanews24

Featured, ರಾಜ್ಯ ನ್ಯೂಸ್

ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್​​ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ  ದಿನಾಂಕ ನಿಗದಿಯಾಗಿದೆ. ಮುಂದಿನ ತಿಂಗಳು ಮಾರ್ಚ್ 6 ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮಾರ್ಚ್‌ 6 ರಂದು ಮುಖ್ಯಮಂತ್ರಿಗಳು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ರಾಜ್ಯ ಹಣಕಾಸು ಖಾತೆಯನ್ನು ಸಹ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ಸಾಲು ಸಾಲು ಬಜೆಟ್​​​​ ಪೂರ್ವ ಸಿದ್ಧತಾ ಸಭೆಗಳಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ: 

ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಬೆಂಕಿ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಬಜೆಟ್​ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಸಂಘಟನೆ ಮತ್ತು ಮುಖಂಡರ ಜೊತೆಗೆ ಸಭೆ ನಡೆಸಿದ್ದಾರೆ. ಬಜೆಟ್ ಸಿದ್ದತೆ ವಿಚಾರದಲ್ಲಿ ಸಂಘಟನೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ: 

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್, ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಅಮಾನತು – vishwanews24

Leave a Reply